ಹೊಸಕೋಟೆ: ಸರ್ಕಾರಿ ಶಾಲೆಯಲ್ಲಿ ಕೊಳೆತ ಮೊಟ್ಟೆ ತಿಂದು 8 ಮಕ್ಕಳು ಅಸ್ವಸ್ಥ

Published : Jan 12, 2024, 10:57 AM IST
ಹೊಸಕೋಟೆ: ಸರ್ಕಾರಿ ಶಾಲೆಯಲ್ಲಿ ಕೊಳೆತ ಮೊಟ್ಟೆ ತಿಂದು 8 ಮಕ್ಕಳು ಅಸ್ವಸ್ಥ

ಸಾರಾಂಶ

ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಕಳೆದೆರಡು ದಿನಗಳಿಂದ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಳೆತ ಮೊಟ್ಟೆಯನ್ನ ತಿಂದು 8 ಮಂದಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 

ಹೊಸಕೋಟೆ(ಜ.12):  ಮಧ್ಯಾಹ್ನದ ಊಟ ತಿಂದ 8 ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಯ ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿನ್ನೆ(ಗುರುವಾರ) ನಡೆದಿದೆ. 

ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಕಳೆದೆರಡು ದಿನಗಳಿಂದ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಳೆತ ಮೊಟ್ಟೆಯನ್ನ ತಿಂದು 8 ಮಂದಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 

ಬದುಕು ನರಕವಾಗಿಸುವ ನಶೆಗಳಿಂದ ದೂರವಿರಿ: ನಟಿ ಪೂಜಾಗಾಂಧಿ

ಅಸ್ವಸ್ಥವಾಗಿರುವ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಉಳಿದುಕೊಂಡಿರುವರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಊಟ ಮಾಡಿದ ನಂತರ ವಸತಿ ‌ನಿಲಯದಲ್ಲಿದ್ದ  ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರೌಢಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯೇ ಕಾರಣ ಅಂತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 

PREV
Read more Articles on
click me!

Recommended Stories

ಬೀದರ್: ಸಂಕ್ರಾಂತಿ ಸಂಭ್ರಮದ ನಡುವೆ ಘೋರ ದುರಂತ; ಗಾಳಿಪಟ ಹಾರಿಸಲು ಹೋಗಿದ್ದ ಯುವಕ ಸಾವು!
ಲಕ್ಕುಂಡಿ ಉತ್ಖನನ: ನಾಗ ಮಣಿಯೊಂದಿಗೆ ಇರುವ ಸರ್ಪದ ಹೆಡೆ ಪತ್ತೆ! ಹಾವು ಪ್ರತ್ಯಕ್ಷವಾಗಿ ನಿಧಿ ಇರೋ ಸೂಚನೆ ಕೊಡ್ತಾ?