ಗ್ರೀನ್‌ ಝೋನ್‌ನಲ್ಲಿದ್ದ ಸಿಎಂ ತವರು ಜಿಲ್ಲೆಗೆ ವಕ್ಕರಿಸಿದ ಕೊರೋನಾ...!

Published : May 10, 2020, 02:47 PM ISTUpdated : May 10, 2020, 03:00 PM IST
ಗ್ರೀನ್‌ ಝೋನ್‌ನಲ್ಲಿದ್ದ ಸಿಎಂ ತವರು ಜಿಲ್ಲೆಗೆ ವಕ್ಕರಿಸಿದ ಕೊರೋನಾ...!

ಸಾರಾಂಶ

ವೈರಸ್​ನ ಸುಳಿವೇ ಇಲ್ಲದೆ ಹಸಿರು ವಲಯ (ಗ್ರೀನ್​ ಝೋನ್​) ಎಂದು ಕರೆಸಿಕೊಂಡು ತಣ್ಣಗಿದ್ದ ಶಿವಮೊಗ್ಗ ಇದೀಗ ಕೊರೋನಾ ವಕ್ಕರಿಸಿದೆ.

ಶಿವಮೊಗ್ಗ, (ಮೇ.10): ಕರ್ನಾಟಕಕ್ಕೆ ಕೊರೋನಾ ಮಹಾಮಾರಿ ದಾಂಗುಂಡಿ ಇಟ್ಟಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ಪತ್ತೆಯಾಗದ ಶಿವಮೊಗ್ಗದಲ್ಲಿ ಇಂದು (ಭಾನುವಾರ) 8 ಪ್ರಕರಣಗಳು ಪತ್ತೆಯಾಗಿವೆ. 

ವೈರಸ್​ನ ಸುಳಿವೇ ಇಲ್ಲದೆ ಹಸಿರು ವಲಯ (ಗ್ರೀನ್​ ಝೋನ್​) ಎಂದು ಕರೆಸಿಕೊಂಡು ತಣ್ಣಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಶಿಕಾರಿಪುರದಲ್ಲಿ 7 ಹಾಗೂ ತೀರ್ಥಹಳ್ಳಿಯಲ್ಲಿ ಒಂದು ಪ್ರಕರಣಗಳು ಬೆಳಕಿವೆ ಬಂದಿವೆ. 

21 ತಬ್ಲಿಘಿಗಳು ಸೇರಿ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. 

ಈ ಪೈಕಿ 8 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು ಇವರೆಲ್ಲಾ ಸಿಎಂ ಬಿಎಸ್ ಯಡಿಯೂರಪ್ಪನವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. 

ಸದ್ಯ 8 ಮಂದಿ ಕೊರೋನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

PREV
click me!

Recommended Stories

ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್‌ಡಿಎ ಸೇರಿ 6 ಜನರ ವಿರುದ್ಧ FIR ದಾಖಲು!
ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ?