ಗ್ರೀನ್‌ ಝೋನ್‌ನಲ್ಲಿದ್ದ ಸಿಎಂ ತವರು ಜಿಲ್ಲೆಗೆ ವಕ್ಕರಿಸಿದ ಕೊರೋನಾ...!

By Suvarna NewsFirst Published May 10, 2020, 2:47 PM IST
Highlights

ವೈರಸ್​ನ ಸುಳಿವೇ ಇಲ್ಲದೆ ಹಸಿರು ವಲಯ (ಗ್ರೀನ್​ ಝೋನ್​) ಎಂದು ಕರೆಸಿಕೊಂಡು ತಣ್ಣಗಿದ್ದ ಶಿವಮೊಗ್ಗ ಇದೀಗ ಕೊರೋನಾ ವಕ್ಕರಿಸಿದೆ.

ಶಿವಮೊಗ್ಗ, (ಮೇ.10): ಕರ್ನಾಟಕಕ್ಕೆ ಕೊರೋನಾ ಮಹಾಮಾರಿ ದಾಂಗುಂಡಿ ಇಟ್ಟಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ಪತ್ತೆಯಾಗದ ಶಿವಮೊಗ್ಗದಲ್ಲಿ ಇಂದು (ಭಾನುವಾರ) 8 ಪ್ರಕರಣಗಳು ಪತ್ತೆಯಾಗಿವೆ. 

ವೈರಸ್​ನ ಸುಳಿವೇ ಇಲ್ಲದೆ ಹಸಿರು ವಲಯ (ಗ್ರೀನ್​ ಝೋನ್​) ಎಂದು ಕರೆಸಿಕೊಂಡು ತಣ್ಣಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಶಿಕಾರಿಪುರದಲ್ಲಿ 7 ಹಾಗೂ ತೀರ್ಥಹಳ್ಳಿಯಲ್ಲಿ ಒಂದು ಪ್ರಕರಣಗಳು ಬೆಳಕಿವೆ ಬಂದಿವೆ. 

21 ತಬ್ಲಿಘಿಗಳು ಸೇರಿ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. 

ಈ ಪೈಕಿ 8 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು ಇವರೆಲ್ಲಾ ಸಿಎಂ ಬಿಎಸ್ ಯಡಿಯೂರಪ್ಪನವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. 

ಸದ್ಯ 8 ಮಂದಿ ಕೊರೋನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋವಿಡ್19: ಬೆಳಗಿನ ವರದಿ

ಒಟ್ಟು ಪ್ರಕರಣಗಳು: 847
ಮೃತಪಟ್ಟವರು: 31
ಗುಣಮುಖರಾದವರು: 405
ಹೊಸ ಪ್ರಕರಣಗಳು: 53

ಇತರೆ ಮಾಹಿತಿ: ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ. pic.twitter.com/KmXGx2ab03

— CM of Karnataka (@CMofKarnataka)
click me!