ಗುರುಮಠಕಲ್‌: 8 ಅಡಿ ಉದ್ದದ ಹೆಬ್ಬಾವು ರಕ್ಷಣೆ

By Kannadaprabha NewsFirst Published Jun 10, 2023, 9:30 PM IST
Highlights

ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಗುರುಮಠಕಲ್‌(ಜೂ.10):  ಗುರುಮಠಕಲ್‌ ಪಟ್ಟಣದ ಪೊಲೀಸ್‌ ಠಾಣೆ ಸಮೀಪದ ಚರಂಡಿಯಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವನ್ನು ಉರಗ ತಜ್ಞ ನರಸಿಂಹಲು ಅವರು ಸೆರೆ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಯಾದಗಿರಿ: ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು

ತಕ್ಷಣ ಈ ವಿಷಯ ನರಸಿಂಹಲು ಅವರ ಗಮನಕ್ಕೆ ಬಂದಾಗ ಸ್ಥಳಕ್ಕಾಗಮಿಸಿ 8 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಇದರಿಂದ ಜನರು ನಿಟ್ಟುಸಿರುಬಿಟ್ಟರು.

click me!