ಬೆಂಗಳೂರು ಕಟ್ಟಡ ದುರಂತ: ಮಾಲೀಕನ ದುರಾಸೆಗೆ ಅಮಾಯಕರು ಬಲಿ

Published : Oct 24, 2024, 06:15 AM ISTUpdated : Oct 24, 2024, 12:17 PM IST
ಬೆಂಗಳೂರು ಕಟ್ಟಡ ದುರಂತ: ಮಾಲೀಕನ ದುರಾಸೆಗೆ ಅಮಾಯಕರು ಬಲಿ

ಸಾರಾಂಶ

ಮೃತ 8 ಮಂದಿ ಕಾರ್ಮಿಕರ ಪೈಕಿ ಬಿಹಾರದ ನಾಲ್ವರು, ನೆರೆಯ ತಮಿಳುನಾಡಿನ ಇಬ್ಬರು, ಆಂಧ್ರಪ್ರದೇಶ ಹಾಗೂ ಉತ್ತರಪ್ರದೇಶದ ತಲಾ ಓರ್ವ ಕಾರ್ಮಿಕರು ಇದ್ದಾರೆ. ಮನೆಗೆ ಆಧಾರವಾಗಿದ್ದ ಸದಸ್ಯರನ್ನು ಕಳೆದುಕೊಂಡಿರುವ ಮೃತರ ಕುಟುಂಬ ಗಳು ದುಃಖದ ಕಡಲಿನಲ್ಲಿ ಮುಳುಗುವಂತಾಗಿದೆ.   

ಬೆಂಗಳೂರು(ಅ.24):  ಬಾಬುಸಾಪಾಳ್ಯದಲ್ಲಿ ಏಳು ಅಂತಸ್ಸಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಎಂಟು ಮಂದಿ ಬಡ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೊಟ್ಟೆಪಾಡಿಗಾಗಿ ದೂರದೂರುಗಳಿಂದ ಕೆಲಸ ಅರಸಿ ನಗರಕ್ಕೆ ಬಂದಿದ್ದ ಕಾರ್ಮಿಕರು ತಮ್ಮದಲ್ಲದ ತಪ್ಪಿಗೆ ಸಾವಿನ ಶಿಕ್ಷೆ ಅನುಭವಿಸಿದ್ದಾರೆ. 

ಮೃತ 8 ಮಂದಿ ಕಾರ್ಮಿಕರ ಪೈಕಿ ಬಿಹಾರದ ನಾಲ್ವರು, ನೆರೆಯ ತಮಿಳುನಾಡಿನ ಇಬ್ಬರು, ಆಂಧ್ರಪ್ರದೇಶ ಹಾಗೂ ಉತ್ತರಪ್ರದೇಶದ ತಲಾ ಓರ್ವ ಕಾರ್ಮಿಕರು ಇದ್ದಾರೆ. ಮನೆಗೆ ಆಧಾರವಾಗಿದ್ದ ಸದಸ್ಯರನ್ನು ಕಳೆದುಕೊಂಡಿರುವ ಮೃತರ ಕುಟುಂಬ ಗಳು ದುಃಖದ ಕಡಲಿನಲ್ಲಿ ಮುಳುಗುವಂತಾಗಿದೆ. 

 

ಬೆಂಗಳೂರು ಟ್ರಾಫಿಕ್‌ನಿಂದ ಬೇಸತ್ತ ಜನ: ಕೇವಲ 5 ಕಿ.ಮೀ. ಪಯಣಕ್ಕೆ ಬರೋಬ್ಬರಿ 3 ಗಂಟೆ

ಮಾಲೀಕನ ದುರಾಸೆಗೆ ಅಮಾಯಕರು ಬಲಿ: 

ಕಟ್ಟಡದ ಮಾಲೀಕನ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. 4 ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದಿದ್ದ ಮಾಲೀಕ ಮುನಿರಾಜು ರೆಡ್ಡಿ, ದುರಾಸೆಗೆ ಬಿದ್ದು ಅಕ್ರಮವಾಗಿ ಮತ್ತೆ ಮೂರು ಅಂತಸ್ತು ನಿರ್ಮಾಣಕ್ಕೆ ಮುಂದಾಗಿದ್ದ. ಕಟ್ಟಡ ನಿರ್ಮಾಣದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಟೈಲ್ಸ್ ಅಳವಡಿಕೆ, ಪ್ಲಾಸ್ಟಿಂಗ್ ಸೇರಿ ದಂತೆ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಕಳಪೆ ಕಾಮಗಾರಿಯಿಂದ ಇಡೀ ಕಟ್ಟಡ ಕುಸಿದ ಪರಿಣಾಮ ಕೆಲಸದಲ್ಲಿ ಮಗ್ನರಾಗಿದ್ದ ಕಾರ್ಮಿಕರು ಪೈಕಿ 8 ಮಂದಿ ಕಾರ್ಮಿಕರು ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿ ಉಸಿರು ಚೆಲ್ಲಿದ್ದಾರೆ.

ಗೂಡ್ಸ್‌ ಆಟೋದಲ್ಲಿ ಚಾಲಕನ ಪಕ್ಕ ಕುಳಿತಿದ್ದರೂ ವಿಮೆ ಹಣ: ಹೈಕೋರ್ಟ್

ಕಾರ್ಮಿಕರ ಕೂಗಿ ಕರೆದ ರಕ್ಷಣಾ ಸಿಬ್ಬಂದಿ 

ಇನ್ನು ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿ ಮಂಗಳವಾರ ಸಂಜೆ ಯಿಂದಲೂ ಅವಘಡದ ಸ್ಥಳದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮುರಿದು ಬಿದ್ದಿರುವ ಕಟ್ಟಡಗಳ ಅವಶೇಷಗಳನ್ನು ಜೆಸಿಬಿ ಮತ್ತು ಗ್ಯಾಸ್ ಕಟರ್ ಸಹಾಯದಿಂದ ಕತ್ತರಿಸಿ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದಾರೆ. ಕಟ್ಟಡಗಳ ಅವಶೇಷಗಳ ನಡುವೆ ನಾಪತ್ತೆಯಾಗಿರುವ ಕಾರ್ಮಿಕರು ಬದುಕುಳಿದಿರುವ ಆಶಾಭಾವನೆ ಯಲ್ಲಿ ರಕ್ಷಣಾ ಸಿಬ್ಬಂದಿ ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ 'ನಾವು ರಕ್ಷಣಾ ಸಿಬ್ಬಂದಿ. ನಿಮ್ಮನ್ನು ರಕ್ಷಿಸಲು ಬಂದಿದ್ದೇವೆ. ನಮ್ಮ ದನಿ ಕೇಳುತ್ತಿದೆಯೇ' ಎಂದು ಜೋರಾಗಿ ಕೂಗುವ ದೃಶ್ಯಗಳು ಘಟನಾ ಸ್ಥಳದಲ್ಲಿ ಕಾಣ ಸಿಕ್ಕಿತು.

ಬಿಬಿಎಂಪಿಯ ಸಹಾಯಕ ಎಂಜಿನಿಯ‌ರ್ ಅಮಾನತು 

ಬೆಂಗಳೂರು: ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದು ಎಂಟು ಮಂದಿ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಓರ್ವ ಎಂಜಿನಿಯರ್ ಅಮಾನತುಗೊಳಿಸಿ ಆದೇಶಿಸಲಾಗಿದೆ. ಹೊರಮಾವು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ವಿನಯ್ ತಮ್ಮ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವನ್ನು ಬಿಬಿಎಂಪಿ ಕಾಯ್ದೆ ಪ್ರಕಾರ ತೆರವುಗೊಳಿಸಿಲ್ಲ. ಇದೀಗ ಆ ನಿರ್ಮಾಣ ಹಂತದ ಕಟ್ಟಡ ಕುಸಿದು ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾ ರೆಂದು ಮಹದೇವಪುರದ ವಲಯ ಆಯುಕ್ತರು ವರದಿ ನೀಡಿದ್ದಾರೆ. ಇದು ಗಂಭೀರ ಕರ್ತವ್ಯ ಲೋಪವಾಗಿದೆ. ಹೀಗಾಗಿ, ಇಲಾಖಾ ವಿಚಾರಣೆ ನಿರೀಕ್ಷಿಸಿ ಸೇವೆಯಿಂದ ಅಮಾನತು ಗೊಳಿಸಿ ಬಿಬಿಎಂಪಿಯ ಆಡಳಿತ ವಿಭಾಗದ ಉಪ ಆಯುಕ್ತರು ಬುಧವಾರ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

PREV
Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!