ಕೆ.ಆ‌ರ್.ಪೇಟೆ: ಬದುಕಿದ್ದರೂ ಸರ್ಕಾರಿ ದಾಖಲೆಯಲ್ಲಿ ಮೃತಪಟ್ಟ ವೃದ್ದೆ, ಪಿಂಚಣಿಗೆ ತೊಂದರೆ

Published : May 30, 2024, 11:38 AM IST
ಕೆ.ಆ‌ರ್.ಪೇಟೆ: ಬದುಕಿದ್ದರೂ ಸರ್ಕಾರಿ ದಾಖಲೆಯಲ್ಲಿ ಮೃತಪಟ್ಟ ವೃದ್ದೆ, ಪಿಂಚಣಿಗೆ ತೊಂದರೆ

ಸಾರಾಂಶ

ಕೆ.ಆ‌ರ್. ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಉದ್ದಿನಮಲ್ಲನ ಹೊಸೂರು ಗ್ರಾಮದ ಲಕ್ಷ್ಮಮ್ಮ ಅಂಗವಿಕಲ ವಯೋವೃದ್ಧೆ ಪಿಂಚಿಣಿ ಯೋಜನೆಯಡಿ ವೃದ್ಧಾಪ್ಯ ವೇತನ ಪಡೆಯುತ್ತಿದ್ದರು. ಈ ಭಾಗದ ಗ್ರಾಮ ಆಡಳಿತಾಧಿಕಾರಿ ಸರಿಯಾಗಿ ಪರಿಶೀಲನೆ ನಡೆಸದೆ ಲಕ್ಷ್ಮಮ್ಮ ನಿಧನ ರಾಗಿದ್ದಾರೆಂದು ಸುಳ್ಳು ವರದಿ ದಾಖಲಿಸಿ ಕಳೆದ 2023ರ ಸೆ.14ರಿಂದ ಪಿಂಚಿಣಿ ಸ್ಥಗಿತಗೊಳಿಸಿದ್ದಾರೆ. 

ಕೆ.ಆ‌ರ್.ಪೇಟೆ(ಮೇ.30):  ಜೀವಂತವಾಗಿರುವ ವೃದ್ಧೆಯನ್ನು ಸರ್ಕಾರಿ ದಾಖಲೆಗಳಲ್ಲಿ ನಿಧನವಾಗಿದ್ದಾರೆ ಎಂದು ದಾಖಲಿಸಿ ಆಕೆಗೆ ಬರುತ್ತಿದ್ದ ಇಂದಿರಾ ಗಾಂಧಿ ಪಿಂಚಿಣಿ ಹಣವನ್ನು ಸ್ಥಗಿತಗೊಳಿಸಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. 

ಕೆ.ಆ‌ರ್. ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಉದ್ದಿನಮಲ್ಲನ ಹೊಸೂರು ಗ್ರಾಮದ ಲಕ್ಷ್ಮಮ್ಮ(83) ಅಂಗವಿಕಲ ವಯೋವೃದ್ಧೆ ಪಿಂಚಿಣಿ ಯೋಜನೆಯಡಿ ವೃದ್ಧಾಪ್ಯ ವೇತನ ಪಡೆಯುತ್ತಿದ್ದರು. ಈ ಭಾಗದ ಗ್ರಾಮ ಆಡಳಿತಾಧಿಕಾರಿ ಸರಿಯಾಗಿ ಪರಿಶೀಲನೆ ನಡೆಸದೆ ಲಕ್ಷ್ಮಮ್ಮ ನಿಧನ ರಾಗಿದ್ದಾರೆಂದು ಸುಳ್ಳು ವರದಿ ದಾಖಲಿಸಿ ಕಳೆದ 2023ರ ಸೆ.14ರಿಂದ ಪಿಂಚಿಣಿ ಸ್ಥಗಿತಗೊಳಿಸಿದ್ದಾರೆ. 

ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ಬೆದರಿಕೆ? ಗಲಾಟೆ ತಡೆಯಲು ಮುಂದಾದವರ ಮೇಲೂ ಹಲ್ಲೆ?

ಅಂದಿನಿಂದ 'ಇಂದಿನವರೆಗೂ ನಾನಿನ್ನೂ ಬದುಕಿದ್ದೇನೆ, ದಯಮಾಡಿ ಪಿಂಚಿಣಿ ಹಣ ಕೊಡಿ ಎಂದು ನಾಡ ಕಚೇರಿ, ತಾಲೂಕು ಕಚೇರಿಗೆ ಅಲೆದಾಡುವ ಸ್ಥಿತಿ ಎದುರಾಗಿದೆ.

PREV
Read more Articles on
click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!