ಶಿವಮೊಗ್ಗ : ಬಾಂಬ್‌ ಸ್ಫೋಟ-9 ಮಂದಿಗೆ ಗಾಯ

Published : Nov 03, 2020, 07:53 AM IST
ಶಿವಮೊಗ್ಗ :  ಬಾಂಬ್‌ ಸ್ಫೋಟ-9 ಮಂದಿಗೆ ಗಾಯ

ಸಾರಾಂಶ

ಶಿವಮೊಗ್ಗ ಸಮೀಪದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಒಂದರಲ್ಲಿ 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 

ಶಿವಮೊಗ್ಗ (ನ.03): ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡು 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಸಮೀಪದ ಕುಂಚೇನಹಳ್ಳಿಯಲ್ಲಿ  ನಡೆದಿದೆ.

 ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ತಮಿಳ್‌ ಕುಮಾರ್‌ ಎಂಬುವರ ಮನೆಯಲ್ಲೇ ಘಟನೆ ನಡೆದಿದೆ.

 ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಅನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಅದನ್ನು ಬಿಸಲಿಗೆ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ಸೇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಕೊಟ್ಟೂರು: ಸಿಲಿಂಡರ್ ಸ್ಫೋಟ, ಐವರಿಗೆ ಗಾಯ ...

ಈ ರೀತಿಯ ಘಟನೆಗಳು ವಿವಿಧೆಡೆ ಸಂಭವಿಸುತ್ತಲೇ ಇದ್ದು ಪ್ರಾಣಿಗಳು ಇದರಿಂದ ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. 

PREV
click me!

Recommended Stories

ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ
ಮಂಗಳೂರು KFC ಮಳಿಗೆ, ಮೈಸೂರಿನ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ! ಕೊಳೆತ ಮಾಂಸ ಪತ್ತೆ