ಡಿಜೆ, ಕೆಜಿ ಹಳ್ಳಿ ಗಲಭೆ: ಪರಿಹಾರಕ್ಕೆ 90 ಅರ್ಜಿ

Kannadaprabha News   | Asianet News
Published : Apr 21, 2021, 07:23 AM ISTUpdated : Apr 21, 2021, 07:49 AM IST
ಡಿಜೆ, ಕೆಜಿ ಹಳ್ಳಿ ಗಲಭೆ: ಪರಿಹಾರಕ್ಕೆ 90 ಅರ್ಜಿ

ಸಾರಾಂಶ

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ| ವಿಚಾರಣೆಯನ್ನು ಜೂ. 22ಕ್ಕೆ ಮುಂದೂಡಿದ ನ್ಯಾಯಾಲಯ| 

ಬೆಂಗಳೂರು(ಏ. 21): ನಗರದ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟ ಪರಿಹಾರ ಕೋರಿ 90 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಕ್ಲೇಮ್‌ ಕಮಿಷನರ್‌ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಆಸ್ತಿ ನಷ್ಟ ಅಂದಾಜು ಮಾಡಲು ಕ್ಲೇಮ್‌ ಕಮಿಷನರ್‌ ನೇಮಕ ಮಾಡುವಂತೆ ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿದೆ.

ಡಿಜೆ ಹಳ್ಳಿ  ಗಲಭೆ;  ಜೈಲಿನಿಂದ ಹೊರಬಂದ  29 ಆರೋಪಿಗಳು

ಈ ಹೇಳಿಕೆ ದಾಖಲಿಸಿಕೊಂಂಡ ಪೀಠ, ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳಲ್ಲಿ ಈವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಬಾಣಸವಾಡಿ ಎಸಿಪಿ ಹಾಗೂ ಎನ್‌ಐಎ ಅಧಿಕಾರಿಗಳಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂ. 22ಕ್ಕೆ ಮುಂದೂಡಿದೆ.
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ