ಉಡುಪಿ: ನಮಾಝ್ ಮಾಡುವಾಗ ವ್ಯಕ್ತಿಗೆ ತೀವ್ರ ಹೃದಯಾಘಾತ, ಕುಸಿದುಬಿದ್ದ ಸ್ಥಳದಲ್ಲೇ ಸಾವು

Published : Feb 09, 2024, 09:15 PM IST
ಉಡುಪಿ: ನಮಾಝ್ ಮಾಡುವಾಗ ವ್ಯಕ್ತಿಗೆ ತೀವ್ರ ಹೃದಯಾಘಾತ, ಕುಸಿದುಬಿದ್ದ ಸ್ಥಳದಲ್ಲೇ ಸಾವು

ಸಾರಾಂಶ

ನಮಾಝ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ವ್ಯಕ್ತಿಯೊಬ್ಬ ಮೃತಪ್ಟಟ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಮುಸ್ತಾಕ್(55) ಮೃತ ವ್ಯಕ್ತಿ. ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿಯಾಗಿದ್ದಾರೆ

ಉಡುಪಿ (ಫೆ.9): ನಮಾಝ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ವ್ಯಕ್ತಿಯೊಬ್ಬ ಮೃತಪ್ಟಟ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ.

ಮುಸ್ತಾಕ್(55) ಮೃತ ವ್ಯಕ್ತಿ. ಅವಿವಾಹಿತರಾಗಿರುವ ವ್ಯಕ್ತಿ ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿಯಾಗಿದ್ದಾರೆ. ಇಂದು ಶುಕ್ರವಾರದ ಜುಮ್ಮಾ ನಮಾಝ್‌ಗಾಗಿ ಮಧ್ಯಾಹ್ನದ ವೇಳೆ  ಮಸೀದಿಗೆ ಬಂದಿದ್ದ ಮುಸ್ತಾಕ್. ಖುತ್ಭಾ ಕೇಳಲು ಕುಳಿತಿದ್ದಾಗಲೇ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ನಮಾಝ್ ಮಾಡುವಾಗ ಹೃದಯಾಘಾತದ ದೃಶ್ಯ ಮಸೀದಿಯ ಸಿಸಿಟಿಯಲ್ಲಿ ದಾಖಲಾಗಿದೆ.. ಸದ್ಯ ದೊಡ್ಡಣಗುಡ್ಡೆ ಮಸೀದಿಯಲ್ಲಿ ದಫನ ಕ್ರಿಯೆಗೆ ಸಿದ್ಧತೆ ನಡೆಸಿದ ಕುಟುಂಬಸ್ಥರು.

ನವೀಕರಣದ ವೇಳೆ ಕುಸಿದ ಬಹುಮಹಡಿ ಕಟ್ಟಡ, 6 ಮಹಿಳಾ ಕಾರ್ಮಿಕರು ಸಾವು!

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು