ಪ್ರಿಯತಮನಿಗಾಗಿ ಗಂಡನ ಬಿಟ್ಟು ಓಡಿಬಂದ ಸತ್ಯವ್ವಳ ದುರಂತ ಅಂತ್ಯ; ಕೊಂದು ಸುಟ್ಟು ಹಾಕಿದ್ದು ಯಾರು?

Kannadaprabha News   | Kannada Prabha
Published : Apr 14, 2026, 09:50 AM IST
A young woman murdered by her family members in Belagavi for illicit relationship rav

ಸಾರಾಂಶ

ತನ್ನ ಪತಿಯೊಂದಿಗೆ ಜೀವನ ನಡೆಸದೆ, ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮಾನವನ್ನು ಹರಾಜು ಹಾಕಿದಳು ಎಂಬ ಕಾರಣಕ್ಕೆ ಯುವತಿಯನ್ನು ಕುಟುಂಬಸ್ಥರೇ ಹತ್ಯೆ ಮಾಡಿ, ನಂತರ ಸಾಕ್ಷಿ ನಾಶಕ್ಕಾಗಿ ಶವ ಸುಟ್ಟುಹಾಕಿದ ಘಟನೆ ಮಾ.13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಯಮಕನಮರಡಿ (ಏ.14): ತನ್ನ ಪತಿಯೊಂದಿಗೆ ಜೀವನ ನಡೆಸದೆ, ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮಾನವನ್ನು ಹರಾಜು ಹಾಕಿದಳು ಎಂಬ ಕಾರಣಕ್ಕೆ ಯುವತಿಯನ್ನು ಕುಟುಂಬಸ್ಥರೇ ಹತ್ಯೆ ಮಾಡಿ, ನಂತರ ಸಾಕ್ಷಿ ನಾಶಕ್ಕಾಗಿ ಶವ ಸುಟ್ಟುಹಾಕಿದ ಘಟನೆ ಮಾ.13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಈ ಘಟನೆ ನಡೆದಿದ್ದು ಮಹಾರಾಷ್ಟ್ರದ ಮಿರಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ ಸಂತೋಷ ಹೆಳವಿ (24) ಹತ್ಯೆಗೀಡಾದ ಯುವತಿ. ಯುವತಿ ಸಾವಿಗೆ ಸಂಬಂಧಿಸಿದಂತೆ ಹುಕ್ಕೇರಿ ತಾಲೂಕಿನ ನದಿ ಗುಡಿಕ್ಷೇತ್ರ ಗ್ರಾಮದ ಪ್ರಕಾಶ ಹೆಳವರ (ಯುವತಿ ಚಿಕ್ಕಪ್ಪ), ಶ್ಯಾನೂರ ಹೆಳವರ (ಯುವತಿ ಸಹೋದರ) ಹಾಗೂ ರಾಯಬಾಗ ತಾಲೂಕಿನ ಮೊರಬದ ಕಲ್ಲಪ್ಪ (ಯುವತಿ ಸಹೋದರಿಯ ಪತಿ) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?: 

ಸತ್ಯವ್ವಳನ್ನು ಸಂತೋಷ ಹೆಳವಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ, ಸತ್ಯವ್ವ ಪತಿಯನ್ನು ಬಿಟ್ಟು ತಾನು ಪ್ರೀತಿಸುತ್ತಿದ್ದ ಕೃಷ್ಣಾ ಪಾಟೀಲ (28) ಎಂಬಾತನ ಜೊತೆಗೆ ಪರಾರಿಯಾಗಿದ್ದಳು. ಈ ಕುರಿತು ಕಾಣೆಯಾದ ಬಗ್ಗೆಯೂ ದೂರು ದಾಖಲಾಗಿತ್ತು. ಆದರೆ, ಇವರನ್ನು ಸತ್ಯವ್ವ ಕಡೆಯ ಕುಟುಂಬದವರು ಪತ್ತೆ ಮಾಡಿ ಹತ್ಯೆ ಮಾಡಿದ್ದರು.

ಅವರು ಸಿಕ್ಕಿದ್ದು ಮಹಾರಾಷ್ಟ್ರದ ಮಿರಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎಂದು ಹೇಳಲಾಗುತ್ತಿದೆ. ನಂತರ ಆಕೆಯನ್ನು ಅಲ್ಲಿಯೇ ಹತ್ಯೆ ಮಾಡಿ ಶವ ಸುಟ್ಟು ಹಾಕಿದ್ದಾರೆ. ಈ ಸಂಬಂಧ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಮಹಾರಾಷ್ಟ್ರದ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲು ಪೊಲೀಸರು ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV
Read more Articles on
click me!

Recommended Stories

ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಕಂಗಲಾದ ಬೆಂಗಳೂರು ನಿವಾಸಿಗಳು, ಟ್ಯಾಕ್ಸ್ ಕಟ್ಟಬೇಕು ಅಂದ್ರೆ ಕಸದ ಲೆಕ್ಕ ಕೊಡಬೇಕಂತೆ!
ಆರ್ ಅಶೋಕ್ ಅಂಕಣ | ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಂಬುದಕ್ಕೆ ಅರ್ಥವೇ ಇಲ್ಲ