ಮೈಸೂರು ಪಾಲಿಕೆ ಅಧಿಕಾರಿ ಮನೆಯಲ್ಲಿ 1.3 ಕೆ.ಜಿ. ಚಿನ್ನ ಪತ್ತೆ!

Kannadaprabha News   | Asianet News
Published : Aug 27, 2020, 08:02 AM ISTUpdated : Aug 27, 2020, 08:20 AM IST
ಮೈಸೂರು ಪಾಲಿಕೆ ಅಧಿಕಾರಿ ಮನೆಯಲ್ಲಿ 1.3 ಕೆ.ಜಿ. ಚಿನ್ನ ಪತ್ತೆ!

ಸಾರಾಂಶ

ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ನಡೆದಿದ್ದು, ಈ ವೇಲೆ ಅವರ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನ ಪತ್ತೆಯಾಗಿದೆ.

ಮೈಸೂರು (ಆ.27): ಮೈಸೂರು ಮಹಾನಗರ ಪಾಲಿಕೆ ಅಭಿವೃದ್ಧಿ ಅಧಿಕಾರಿ, ಉಪ ಆಯುಕ್ತ ನಾಗರಾಜು ಅವರ ಮನೆ ಮೇಲಿನ ಭ್ರಷ್ಟಾ​ಚಾರ ನಿಗ್ರಹ ದಳ​(​ಎ​ಸಿ​ಬಿ) ದಾಳಿ ವೇಳೆ ಸುಮಾರು 1.30 ಕೆ.ಜಿ.ಚಿನ್ನ ಪತ್ತೆ​ಯಾ​ಗಿ​ದೆ.

"

ನಾಗ​ರಾಜು ಅವರು ದಟ್ಟಗಳ್ಳಿಯಲ್ಲಿ ಒಂದು ಕಾಂಪ್ಲೆಕ್ಸ್, ಕುವೆಂಪುನಗರದಲ್ಲಿ ಮನೆ ಹೊಂದಿ​ರು​ವುದು ಪತ್ತೆ​ಯಾ​ಗಿ​ದ್ದು, ಅವರ ಮನೆ​ಯಿಂದ 1.30 ಕೆ.ಜಿ. ಚಿನ್ನದ ಜತೆ​ಗೆ .9 ಲಕ್ಷ ಹಣವನ್ನೂ ವಶಕ್ಕೆ ತೆಗೆ​ದು​ಕೊ​ಳ್ಳ​ಲಾ​ಗಿದೆ ಎಂದು ಎಸಿಬಿ ಮೂಲಗಳಿಂದ ತಿಳಿದು ಬಂದಿದೆ. ನಾಗರಾಜು ಮೂಲತಃ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನವರಾಗಿದ್ದು, ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಮಾಡಿದ್ದಾರೆ ಎಂದು ಅಲ್ಲಿನ ಸ್ಥಳೀಯರೊಬ್ಬರು ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಭ್ರಷ್ಟಾಚಾರ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
 
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಚಿನ್ನಾಭರಣ, ನಗದು ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಟಿಡಿಆರ್‌ ಅವ್ಯವಹಾರ: ನಾಲ್ವರ ನಿವಾಸದ ಮೇಲೆ ಎಸಿಬಿ ದಾಳಿ...

ಕೊಳಚೆ ನಿರ್ಮೂಲನಾ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂ.ಎಸ್‌.ನಿರಂಜನ್‌ ಅಲಿಯಾಸ್‌ ಎಂ.ಎಸ್‌.ಎನ್‌.ಬಾಬು ಮತ್ತು ಮೈಸೂರು ಮಹಾನಗರ ಪಾಲಿಕೆ ಅಭಿವೃದ್ಧಿ ಅಧಿಕಾರಿ ಎಚ್‌.ನಾಗರಾಜು ಅವರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು, ತುಮಕೂರು ಮತ್ತು ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳ ಶೋಧ ಕಾರ್ಯ ನಡೆಸಿದ್ದಾರೆ.

ನಿರಂಜನ್‌ ಬಾಬು ಅವರ ತುಮಕೂರಿನ ಶೆಟ್ಟಿಹಳ್ಳಿ, ಮಾರುತಿನಗರದಲ್ಲಿನ ವಾಸದ ಮನೆ, ಬೆಂಗಳೂರು ನಗರದ ಯಶವಂತಪುರ ಗೋಲ್ಡನ್‌ ಗ್ರಾಂಡ್‌ ಅಪಾರ್ಟ್‌ಮೆಂಟ್‌ನಲ್ಲಿನ ಸ್ನೇಹಿತನ ಫ್ಲಾಟ್‌ ಮತ್ತು ನಾಗರಾಜುಗೆ ಸೇರಿದ ಮೈಸೂರು ನಗರದಲ್ಲಿನ ವಾಸದ ಮನೆ ಮತ್ತು ಇವರ ಸಹೋದರ ವಾಸವಾಗಿರುವ ಮಾಗಡಿ ಪಟ್ಟಣದಲ್ಲಿನ ವಾಸದ ಮನೆ, ಇವರ ಬಾಮೈದ ವಾಸವಾಗಿರುವ ಮೈಸೂರು ನಗರದಲ್ಲಿನ ವಾಸದ ಮನೆ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಶೋಧ ಕಾರ್ಯದ ವೇಳೆ ದಾಖಲೆಗಳು ಲಭ್ಯವಾಗಿದ್ದು, ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಅಕ್ರಮ ಆಸ್ತಿಯ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಲಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ.

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್