ಮುಖಾಮುಖಿಯಾದ ಲಾರಿ, ಭೀಕರ ಅಪಘಾತದಲ್ಲಿ ಚಾಲಕ ಸಾವು

Suvarna News   | Asianet News
Published : Jan 24, 2020, 10:54 AM ISTUpdated : Jan 24, 2020, 10:58 AM IST
ಮುಖಾಮುಖಿಯಾದ ಲಾರಿ, ಭೀಕರ ಅಪಘಾತದಲ್ಲಿ ಚಾಲಕ ಸಾವು

ಸಾರಾಂಶ

ಮೈಸೂರಿನ ಹುಣಸೂರಿನಲ್ಲಿ ಎರಡು ಲಾರಿಗಳು ಮುಖಾಮುಖಿಯಾಗಿದೆ. ಕೆ.ಆರ್.ನಗರದ ಹೊಸಕಾಲುವೆ ರೈಲ್ವೆ ಮೇಲುಸೇತುವೆ ಬಳಿ ಭೀಕರ ಅಪಘಾತವಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದೆ.

ಮೈಸೂರು(ಜ.24): ಮೈಸೂರಿನ ಹುಣಸೂರಿನಲ್ಲಿ ಎರಡು ಲಾರಿಗಳು ಮುಖಾಮುಖಿಯಾಗಿದೆ. ಕೆ.ಆರ್.ನಗರದ ಹೊಸಕಾಲುವೆ ರೈಲ್ವೆ ಮೇಲುಸೇತುವೆ ಬಳಿ ಭೀಕರ ಅಪಘಾತವಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದೆ.

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಕೆ.ಆರ್.ನಗರದ ಹೊಸಕಾಲುವೆ ರೈಲ್ವೆ ಮೇಲುಸೇತುವೆ ಬಳಿ  ಅಪಘಾತ ಸಂಭವಿಸಿದ್ದು, ಮುಂಜಾನೆ 2.15 ಸುಮಾರಿನಲ್ಲಿ ಘಟನೆ ನಡೆದಿದೆ.

ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ 4 ದಿನಗಳಿಂದ ರೇಪ್‌

ಹೊಳೆನರಸೀಪುರ ತಾಲೂಕಿನ ನಾಗಲಾಪುರ ಗ್ರಾಮದ ಸೋಮಶೇಖರ್ (47)  ಮೃತರು. ಸೋಮಶೇಖರ್ ರಾತ್ರಿ ಹಾಸನದಿಂದ ಮೈಸೂರಿಗೆ ಜೋಳ ತುಂಬಿಕೊಂಡು ಬರುತ್ತಿದ್ದರು. ಜೋಳದ ಲಾರಿ ಹಾಗೂ ಹುಣಸೂರಿನ ಹನಗೋಡಿನಿಂದ ಉತ್ತರ ಪ್ರದೇಶಕ್ಕೆ ಶುಂಠಿ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದೆ. 

ಜೋಳದ ಗಾಡಿಯ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆ.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಘಟನಾ ಸ್ಥಳ ಪರಿಶೀಲಿಸಿದ್ದಾರೆ. ಜೆಸಿಬಿ ಸಹಾಯದಿಂದ ಮಗುಚಿಬಿದ್ದಿದ್ದ ಲಾರಿಯನ್ನು ಎತ್ತಲಾಗಿದೆ.

ಸೇನಾ ವಸತಿಗೃಹದಲ್ಲಿ ಯೋಧನ ಮೃತದೇಹ ಪತ್ತೆ

PREV
click me!

Recommended Stories

ಭಕ್ತನಂತೆ ಬರ್ತಾನೆ, ದೇವರ ಆಭರಣ ಕದ್ದು ಪರಾರಿಯಾಗ್ತಾನೆ: ಕಲಬುರ್ಗಿ ಖದೀಮ ಯಾರು ನೋಡಿ
ಯೋಗೇಶ್ ಗೌಡ ಹತ್ಯೆ ಪ್ರಕರಣ ಆಪರಾಧಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ, ಸರ್ಕಾರ ಮಹತ್ವದ ಆದೇಶ