KSRTC ಸಿಬ್ಬಂದಿಗೆ ರೂ.50 ಲಕ್ಷದ ಅಪಘಾತ ವಿಮಾ ಸೌಲಭ್ಯ ಜಾರಿ

By Anusha KbFirst Published Oct 19, 2022, 4:09 PM IST
Highlights

KSRTC ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ  ಅವರ ಅವಲಂಬಿತರ ಹಿತ ಕಾಪಾಡುವ ದೃಷ್ಟಿಯಿಂದ KSRTC ಸಿಬ್ಬಂದಿಗೆ ರೂ.50 ಲಕ್ಷದ ಅಪಘಾತ ವಿಮಾ ಸೌಲಭ್ಯ ಜಾರಿಗೆತರಲಾಗಿದೆ

ಬೆಂಗಳೂರು:    ಇದುವರೆಗೂ ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ  ಅಥವಾ ಶಾಶ್ವತ / ಭಾಗಶಃ ಅಂಗವೈಕಲ್ಯಕ್ಕೆ ತುತ್ತಾದರೆ  ಯಾವುದೇ ದೊಡ್ಡ ಮೊತ್ತದ ಪರಿಹಾರದ  ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಸಿಬ್ಬಂದಿಗಳು ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ  ಅವರ ಅವಲಂಬಿತರ ಹಿತ ಕಾಪಾಡುವ ದೃಷ್ಟಿಯಿಂದ KSRTC ಸಿಬ್ಬಂದಿಗೆ ರೂ.50 ಲಕ್ಷದ ಅಪಘಾತ ವಿಮಾ ಸೌಲಭ್ಯ ಜಾರಿಗೆತರಲಾಗಿದೆ

ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ  ಶಾಸಕ ಹಾಗೂ ಅಧ್ಯಕ್ಷರಾದ ಎಂ.ಚಂದ್ರಪ್ಪರವರ ಸಮ್ಮುಖದಲ್ಲಿ  ಭಾಆಸೇ, ಕೆಎಸ್ಆರ್‌ಟಿಸಿ (KSRTC) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್(Anbukumar), ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಡಿ.ಜಿ.ಎಂ,  ಪಂಕಜ್ ತಪ್ಲಿಯಾಲ್ (Pankaj Tapliyal)ಸಹಿ ಹಾಕಿದರು. ಈ ಸಿಬ್ಬಂದಿ ವೇತನ ಪ್ಯಾಕೇಜ್ ಅಪಘಾತ ವಿಮಾ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು (Salary Account) ಹೊಂದಿರುವ ನಿಗಮದ ನೌಕರರಿಗೆ  ಪ್ರೀಮಿಯಂ ರಹಿತ ವೈಯುಕ್ತಿಕ ಅಪಘಾತ ವಿಮೆಯನ್ನು ಒಳಗೊಂಡಿದೆ. (ಈಗಾಗಲೇ ನಿಗಮದ ಶೇ.55 ರಷ್ಷು ಸಿಬ್ಬಂದಿ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಹೊಂದಿರುತ್ತಾರೆ)

EPF Scheme: ಇಪಿಎಫ್ ಖಾತೆದಾರರಿಗೆ ಪ್ರೀಮಿಯಂ ಪಾವತಿಸದೆ 7ಲಕ್ಷ ರೂ. ಜೀವ ವಿಮಾ ಸೌಲಭ್ಯ; ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ

ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಫಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.50 ಲಕ್ಷಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ. ಅಫಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ  ರೂ.20 ಲಕ್ಷಗಳ ಹ಼ಣ ಹಾಗೂ ಶಾಶ್ವತ ಭಾಗಶ: ಅಂಗವೈಕಲ್ಯ ಉಂಟಾದಲ್ಲಿ ರೂ.10 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯ ಮತ್ತೊಂದು ಉಪಯಕ್ತ ಕ್ರಮವೆಂದರೆ  ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ. ಸಿಬ್ಬಂದಿ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ ರೂ.10 ಲಕ್ಷ, ಔಷಧಗಳ ಆಮದಿಗಾಗಿ ಗರಿಷ್ಠ ರೂ.5 ಲಕ್ಷ, ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿ ರೂ.2 ಲಕ್ಷ (ರೂ.50 ಲಕ್ಷ + ರೂ.2 ಲಕ್ಷ), ಏರ್ ಅಂಬ್ಯೂಲೆನ್ಸ್ ಸೇವೆಗೆ ರೂ.10 ಲಕ್ಷ ವಿಮಾ ಪರಿಹಾರ ನೀಡಲಾಗುವುದು.

ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಟ ರೂ.5 ಲಕ್ಷ ಹಾಗೂ ಹೆಣ್ಣು ಮಗಳ ವಿವಾಹಕ್ಕೆ (Daughter wedding) ಗರಿಷ್ಟ ರೂ.5 ಲಕ್ಷಗಳ ವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆಯು ಒಳಗೊಂಡಿರುತ್ತದೆ. ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ನವರು ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ  ಜಾರಿಗೊಳಿಸುತ್ತಿರುವ ಉತ್ತಮವಾದ ಯೋಜನೆಯಾಗಿರುವುದಾಗಿ ತಿಳಿಸಿ, ಭಾರತೀಯ ಸ್ಟೇಟ್ ಬ್ಯಾಂಕ್‌ ರವರ ಸಹಯೋಗಕ್ಕೆ ಅಭಿನಂದನೆ ಸಲ್ಲಿಸಿದರು ಹಾಗೂ ರಸ್ತೆ ಸಾರಿಗೆ ನಿಗಮಗಳಲ್ಲಿಯೇ ಅತ್ಯಧಿಕ ಮೊತ್ತದ ಅಪಘಾತ ( On duty ಮತ್ತು Off duty ಒಳಗೊಂಡಂತೆ ನೀಡಲಾಗುವ) ವಿಮಾ ಯೋಜನೆಯಾಗಿರುವುದಾಗಿ ಸಂತಸ ವ್ಯಕ್ರಪಡಿಸಿದರು.

CAPF ಸಿಬ್ಬಂದಿಗೂ ಆಯುಷ್ಮಾನ್‌ ವಿಮಾ ಯೋಜನೆ ಜಾರಿ

ಈ  ಕಾರ್ಯಕ್ರಮದಲ್ಲಿ ಡಾ. ನವೀನ್ ಭಟ್ ವೈ, ಭಾಆಸೇ, ನಿರ್ದೇಶಕರು (ಸಿಬ್ಬಂದಿ & ಜಾಗೃತ), ಶ್ರೀ. ಸರೋಜ್ ಕುಮಾರ್ ದಾಸ್, ಮುಖ್ಯ ವ್ಯವಸ್ಥಾಪಕರು, ಎಸ್.ಬಿ.ಐ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 

click me!