ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಬೆಂಕಿ: ಧಗ ಧಗನೇ ಹೊತ್ತಿ ಉರಿದ ಟ್ರಕ್

Kannadaprabha News   | Asianet News
Published : Feb 23, 2020, 12:30 PM IST
ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಬೆಂಕಿ: ಧಗ ಧಗನೇ  ಹೊತ್ತಿ ಉರಿದ ಟ್ರಕ್

ಸಾರಾಂಶ

ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ| ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ನಡೆದ ಘಟನೆ| ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪಟ್ಟಣ ಸಾಗಿಸುತ್ತಿದ್ದ ಲಾರಿ|

ವಿಜಯಪುರ(ಫೆ.23): ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿ​ವಾರ ಬೆಳಗಿನ ಜಾವ ಸಂಭ​ವಿ​ಸಿದೆ.

ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ತುಂಬಿಕೊಂಡು ಹೊರಟಿದ್ದ ಲಾರಿಗೆ ಬೆಂಕಿ ತಗುಲಿದೆ. ತಕ್ಷಣವೇ ಚಾಲಕ ಲಾರಿಯಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಬೆಂಕಿ ಪೊಟ್ಟಣ ಹಾಗೂ ಸುಮಾರು 15 ಲಕ್ಷ ಮೌಲ್ಯದ ಲಾರಿ ಸಂಪೂರ್ಣ ಸುಟ್ಟು ಹಾಳಾಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

'ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..' ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
ಗಂಗಾವತಿ ಕಾಂಗ್ರೆಸ್‌ನಲ್ಲಿ ಭಿನ್ನಮತ? ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಗಂಭೀರ ಆರೋಪ