ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಸರ್ಕಾರದಿಂದಲೇ ಆಚರಣೆ: ಸಿಎಂ ಬೊಮ್ಮಾಯಿ

By Govindaraj SFirst Published Aug 27, 2022, 12:31 PM IST
Highlights

ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ತುಮಕೂರು (ಆ.27): ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಶುಕ್ರವಾರ ನಡೆದ ’ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಮತ್ತು ಗುರುವಂದನಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಗ್ನಿಬನ್ನಿರಾಯ, ತಿಗಳರ ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹೆಚ್ಚಿನ ಅಧ್ಯಯನ ಕೈಗೊಳ್ಳಲು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಕೇಂದ್ರ ತೆರೆಯಲಾಗುವುದು. ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕಾಗಿ ವಿಶೇಷ ಅನುದಾನವನ್ನು ನೀಡಿ ಅವರ ಅಭ್ಯುದಯಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದರಲ್ಲದೇ ಕೃಷಿಯಾಧರಿತ ಕಸುಬುದಾರರಿಗೆ ವಿಶೇಷ ಘಟಕ ಯೋಜನೆಯಡಿ ಅನುದಾನವನ್ನು ನೀಡಲಾಗುತ್ತಿದ್ದು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ನೋಡಿ ಹೋದ ಕೆಲವೇ ನಿಮಿಷದಲ್ಲಿ ಕುಸಿದ ಸೇತುವೆ, ಅಪಾಯದಿಂದ ಪರಮೇಶ್ವರ್ ಪಾರು

ತಿಗಳ ಸಮಾಜದ ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರಗಳಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ 4.45 ಕೋಟಿ ರು.ಅನುದಾನವನ್ನು ನೀಡಿ ಅವರ ಶೈಕ್ಷಣಿಕ ಸಾಧನೆಗೆ ಸರ್ಕಾರ ಬದ್ದವಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮಾಜ ವರ್ಗದವರು ಆರ್ಥಿಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಬಲರಾಗಲು ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಎಲ್ಲ ವರ್ಗದ ಜನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಏನೆಲ್ಲಾ ಅವಕಾಶವಿದೆ ಎಲ್ಲವನ್ನೂ ಸಹ ಸರ್ಕಾರದ ವತಿಯಿಂದ ಮಾಡಲಾಗುವುದು. ನಮ್ಮ ಶ್ರಮಕ್ಕೆ ನಮ್ಮ ಬೆವರಿಗೆ ತಕ್ಕ ಪ್ರತಿಫಲ ಸಿಕ್ಕಾಗ ಮಾತ್ರ ನಮ್ಮ ಬದುಕಿನಲ್ಲಿ ಮಹತ್ತರ ಬದಲಾವಣೆ ಕಾಣಬಹುದು ಎಂದರು.

21ನೇ ಶತಮಾನವು ಜ್ಞಾನಾಧಾರಿತ ಯುಗವಾಗಿದ್ದು, ಸಮಾಜದ ಕುಲಕಸುಬಾದ ತೋಟಗಾರಿಕೆಯೊಂದಿಗೆ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ಉನ್ನತ ಹುದ್ದೆಗಳಿಗೇರವುದರತ್ತ ಚಿಂತಿಸಬೇಕೆಂದರು. ಬದುಕಿನಲ್ಲಿ ಬದಲಾವಣೆ ತರಬೇಕಾದರೆ ಬೆವರಿಗೆ ಬೆಲೆ ಸಿಗುವಂತಾಗಬೇಕು. ದುಡಿಮೆಯಿಂದ ಮಾತ್ರ ಆದಾಯಗಳಿಸಲು ಸಾಧ್ಯ ಎಂದ ಅವರು ದುಡ್ಡು ದೊಡ್ಡಪ್ಪನಲ್ಲ, ದುಡಿಮೆಯೇ ದೊಡ್ಡಪ್ಪ. ಇದರಿಂದ ರಾಜ್ಯಾದಾಯ ವೃದ್ಧಿಯಾಗುತ್ತದೆ ಎಂದರು. ಮುಖ್ಯಮಂತ್ರಿ ಬಸವರಾಜ ಎಸ್‌ ಬೊಮ್ಮಾಯಿಗೆ ರಜತ ಕತ್ತಿಯನ್ನು ನೀಡಿ ಗೌರವಿಸಲಾಯಿತು. ತಿಗಳ ಸಮಾಜದ ಜ್ಞಾನನಂದಪುರಿ ಸ್ವಾಮಿಗೆ ಗುರುವಂದನೆಯನ್ನು ಸಲ್ಲಿಸಲಾಯಿತು. ಜತೆಗೆ ಲೇಖಕ ಸೂರ್ಯಪ್ರಕಾಶ್‌ ಬರೆದಿರುವ ಅಗ್ನಿಬನ್ನಿರಾಯ ಸ್ವಾಮಿಯ ಕುರಿತ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು.

ಸಿದ್ದಗಂಗಾ ಮಠಕ್ಕೆ‌ ಮೆಡಿಕಲ್‌ ಕಾಲೇಜು ಮಂಜೂರು : ಈ ಶೈಕ್ಷಣಿಕ ವರ್ಷದಿಂದಲ್ಲೇ ವೈದ್ಯಕೀಯ ತರಗತಿಗಳು ಪ್ರಾರಂಭ

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧೀಶ ಡಾ.ಸಿದ್ದಲಿಂಗ ಸ್ವಾಮಿ, ವಿವಿಧ ಮಠಗಳ ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಆಶಿರ್ವಚನ ನೀಡಿದರು. ಶಿಕ್ಷಣ ಸಚಿವ ಬಿ.ಸಿ ನಾಗೇಶ್‌, ಸಂಸದ ಜಿ.ಎಸ್‌. ಬಸವರಾಜು, ವಿಧಾನ ಪರಿಷತ್ತು ಸದಸ್ಯ ಸಿ.ಪಿ ಯೋಗೀಶ್ವರ್‌, ಪಿ.ಆರ್‌.ರಮೇಶ್‌, ಶಾಸಕರಾದ ಜ್ಯೋತಿಗಣೇಶ್‌, ಡಾ.ಸಿ.ಎಂ. ರಾಜೇಶ್‌ ಗೌಡ, ಮಸಾಲ ಜಯರಾಂ, ಮಾಜಿ ಶಾಸಕರಾದ ನೆ.ಲ ನರೇಂದ್ರಬಾಬು, ಬಿ.ಸುರೇಶ್‌ ಗೌಡ ಎಂ.ಡಿ ಲಕ್ಷ್ಮೀನಾರಾಯಣ, ಮುಖಂಡರಾದ ಮುರುಳಿಧರ್‌ ಹಾಲಪ್ಪ ಮುಂತಾದವರು ಹಾಜರಿದ್ದರು.

click me!