ಎಐ ‘ಕಪ್ಪು ಚಿರತೆ’ ಕಂಡುಬೆಚ್ಚಿಬಿದ್ದ ಮಳವಳ್ಳಿ ಜನ! ಸೆರೆಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆಗೆ ಕಂಡಿದ್ದೇ ಬೇರೆ!

Kannadaprabha News   | Kannada Prabha
Published : Mar 26, 2026, 05:53 AM IST
AI Generated Black Panther Image Triggers Panic Among Malavalli Residents mandya

ಸಾರಾಂಶ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಪ್ಪು ಚಿರತೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಫೋಟೋದಿಂದ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಆತಂಕಗೊಂಡಿದ್ದರು. ತೀವ್ರ ಕಾರ್ಯಾಚರಣೆಯ ನಂತರ, ತಿಳಿದುಬಂದಿದ್ದು ಏನೆಂದರೆ..

ಮಂಡ್ಯ (ಮಾ.26): ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಿದ ಚಿರತೆಯನ್ನು ಕಂಡು ಮಂಡ್ಯ ಜಿಲ್ಲೆ ಮಳವಳ್ಳಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇಡೀ ದಿನ ಕಂಗಾಲಾಗಿರುವ ಪ್ರಸಂಗ ಬುಧವಾರ ನಡೆದಿದೆ.

ಹೌದು, ‘ಮಳವಳ್ಳಿಯಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ’ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಒಂದು ಫೋಟೋ ಹರಿಬಿಡಲಾಗಿತ್ತು. ಇದನ್ನು ನಂಬಿದ ಜನರು ಬೆಚ್ಚಿಬಿದ್ದು ಕೂಡಲೇ ಅದನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದರು. ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಮೈಸೂರಿನಿಂದ ಚಿರತೆ ಕಾರ್ಯಪಡೆ ಕರೆಸಿ ಪರಿಶೀಲಿಸಿ, ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. 

ಆ ಬಳಿಕ ಡ್ರೋನ್ ಬಳಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ತಪಾಸಣೆ ನಡೆಸಲಾಗಿದ್ದು, ಎಲ್ಲಿಯೂ ಕಪ್ಪು ಚಿರತೆ ಕಂಡುಬರಲಿಲ್ಲ. ಈ ವೇಳೆ ಫೋಟೋವನ್ನು ಸರಿಯಾಗಿ ಪರಿಶೀಲಿಸಿದಾಗ ಅದು ಕೆಲ ಕಿಡಿಗೇಡಿಗಳು ಎಐ ಬಳಸಿ ಸೃಷ್ಟಿಸಿದ ಚಿತ್ರ ಎಂಬುದು ಖಚಿತವಾಗಿದೆ. ಆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕಪ್ಪು ಚಿರತೆ ಈ ಭಾಗದಲ್ಲಿ ಕಂಡುಬರುವುದಿಲ್ಲ ಎಂದು ಕೆಲ ಅರಣ್ಯ ಅಧಿಕಾರಿಗಳು ಹೇಳಿದರು ಸಹ ಜನರು ನಂಬಿರಲಿಲ್ಲ. ಜನರ ಆಕ್ರೋಶಕ್ಕೆ ಮಣಿದು ಇಲ್ಲದ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ ಎನ್ನುವುದೇ ವಿಪರ್ಯಾಸ.

PREV
Read more Articles on
click me!

Recommended Stories

ರಾಜ್ಯದಲ್ಲಿ ಉಪ ಚುನಾವಣೆ ಬಿರುಸು ಬೆನ್ನಲ್ಲೇ ಕೈ ನಾಯಕರು ಕಮಲಕ್ಕೆ
ಶಾಲೆ, ಕಾಲೇಜುಗಳ ಜಾಗ ಇನ್ಮುಂದೆ ಸರ್ಕಾರದ ಆಸ್ತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ