ಈತನಿಗೆ ಅದು ಏನಾಗಿತ್ತೋ ಗೊತ್ತಿಲ್ಲ. ತಲೆಗೆ ಅಮಲೇರಿತ್ತು. ಕುಡಿದ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡು ಇದೀಗ ಆಸ್ಪತ್ರೆ ಸೇರಿದ್ದಾನೆ.
ವಿಜಯಪುರ[ಸೆ.2] ಕುಡಿದ ಅಮಲಿನಲ್ಲಿ ಈತ ಬ್ಲೇಡ್ ನಿಂದ ಮರ್ಮಾಂಗ ಕತ್ತರಸಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದಲ್ಲಿ ಘಟನೆ ನಡೆದಿದೆ.
ಭಾನುವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ರಾಜಕುಮಾರ ಕುಂಬಾರ[40] ಎಂಬಾತನೇ ಮರ್ಮಾಂಗ ಕತ್ತರಿಸಿಕೊಂಡವ. ವಿಜಯಪುರದ ಖಾಸಗಿ ಆಸ್ಪತ್ರೆಗೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ. ಪಡೆಯುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ.
ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ರಾಜಕುಮಾರ ಅದು ಯಾವ ಕಾರಣಕ್ಕೆ ಹೀಗೆ ಮಾಡಿಕೊಂಡರೋ ಗೊತ್ತಿಲ್ಲ.