ಕೇರಳ ಸಂಪರ್ಕ ಕಲ್ಪಿಸುವ ಒಳ ರಸ್ತೆಗಳು ಸಂಪೂರ್ಣ ಬಂದ್‌

By Kannadaprabha NewsFirst Published May 12, 2020, 9:19 AM IST
Highlights

ಕೊರೋನಾ ಹಿನ್ನೆಲೆಯಲ್ಲಿ ಅಂತಾರಾಜ್ಯ ಸಂಪರ್ಕ ರಸ್ತೆ ಬಂದ್‌ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಪರಿಣಾಮ ಇಲ್ಲಿನ ಕರಿಕೆ, ಕುಟ್ಟ, ಮಾಕುಟ್ಟಅಂತರ್‌ ರಾಜ್ಯ ಗಡಿಯಲ್ಲಿ ರಸ್ತೆ ಬಂದ್‌ ಮಾಡಿ ಚೆಕ್‌ ಪೋಸ್ಟ್‌ ಅಳವಡಿಸಿ ಬಿಗಿ ಪೊಲೀಸ್‌ ಭದ್ರತೆ ಕಲ್ಪಿ​ಸ​ಲಾ​ಯಿತು.

ಮಡಿಕೇರಿ(ಮೇ 12): ಕೊರೋನಾ ಹಿನ್ನೆಲೆಯಲ್ಲಿ ಅಂತಾರಾಜ್ಯ ಸಂಪರ್ಕ ರಸ್ತೆ ಬಂದ್‌ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಪರಿಣಾಮ ಇಲ್ಲಿನ ಕರಿಕೆ, ಕುಟ್ಟ, ಮಾಕುಟ್ಟಅಂತರ್‌ ರಾಜ್ಯ ಗಡಿಯಲ್ಲಿ ರಸ್ತೆ ಬಂದ್‌ ಮಾಡಿ ಚೆಕ್‌ ಪೋಸ್ಟ್‌ ಅಳವಡಿಸಿ ಬಿಗಿ ಪೊಲೀಸ್‌ ಭದ್ರತೆ ಕಲ್ಪಿ​ಸ​ಲಾ​ಯಿತು.

ಆದರೆ ಕೊಡಗು ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿ ಕೇರಳ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಗೇರು ಪ್ಲಾಂಟೇಷÜನ್‌ಗಾಗಿ ಹಾದುಹೋಗಿರುವ ಪಾಣತ್ತೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕೇರಳದಲ್ಲಿ ಗೇಟ್‌ ಇದೆ.

ಊರಿಗೆ ಕಳಿಸ್ತೀವಂತ ಹಣ ಕೀಳ್ತಿದ್ದಾರೆ ಮಧ್ಯವರ್ತಿಗಳು: ಮೋಸದ ಜಾಲ

ಆದರೂ ರಸ್ತೆ ಮೂಲಕ ಕದ್ದು ಮುಚ್ಚಿ ನಿರಂತರವಾಗಿ ವಾಹನ ಓಡಾಡುವುದನ್ನು ಅಧಿ​ಕಾರಿ​ಗಳು ಪತ್ತೆಹಚ್ಚಿದ್ದಾರೆ. ಭಾಗಮಂಡಲ ಠಾಣಾ​ಧಿಕಾರಿ ಮಹದೇವ ಹಾಗೂ ಸಿಬ್ಬಂದಿ ಜೆಸಿಬಿ ಯಂತ್ರ ಮೂಲಕ ರಸ್ತೆಗೆ ಮಣ್ಣು ಸುರಿದು ಸಂಪೂರ್ಣವಾಗಿ ಬಂದ್‌ ಮಾಡಿದರು.

click me!