ಹಾವೇರಿ: ಪ್ರಣವಾನಂದ ಸ್ವಾಮೀಜಿ- ಗ್ರಾಮಸ್ಥರ ಮಧ್ಯೆ ಜಟಾಪಟಿ, 144 ಸೆಕ್ಷನ್ ಜಾರಿ

Published : Oct 04, 2020, 02:10 PM IST
ಹಾವೇರಿ: ಪ್ರಣವಾನಂದ ಸ್ವಾಮೀಜಿ- ಗ್ರಾಮಸ್ಥರ ಮಧ್ಯೆ ಜಟಾಪಟಿ, 144 ಸೆಕ್ಷನ್ ಜಾರಿ

ಸಾರಾಂಶ

ನೀವೂ ನಮ್ಮ ಸ್ವಾಮಿಯಲ್ಲ, ನಮ್ಮೂರಿಂದ ಹೊರಹೋಗಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು| ಸ್ವಾಮೀಜಿ ಹಾಗೂ  ಗ್ರಾಮಸ್ಥರ ಮಧ್ಯೆ ವಾಗ್ವಾದ| ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ| ಗ್ರಾಮದಲ್ಲಿ ಬೀಡುಬಿಟ್ಟ ಎರಡೂ ನೂರಕ್ಕೂ ಅಧಿಕ ಪೋಲಿಸರು| 

ಹಾವೇರಿ(ಅ.04): ಶಿವಾಜಿ ಮಹಾರಾಜರ ಪುತ್ಥಳಿಗೆ ಹಾರ ಹಾಕುವ ಸಂಬಂಧ ಪ್ರಣವಾನಂದ ಸ್ವಾಮೀಜಿ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ.

ಅರೇಮಲ್ಲಾಪುರ ಗ್ರಾಮದ ಸರ್ಕಲ್‌ನಲ್ಲಿ ಶಿವಾಜಿ ಮೂರ್ತಿಗೆ ಇಂದು ಬೆಳಿಗ್ಗೆ ತೀವ್ರ ವಿರೋಧದ ನಡುವೆಯೂ ಶರಣಬಸವೇಶ್ವರ ಮಠದ ಪೀಠಾಧ್ಯಕ್ಷರಾಗಿರುವ ಪ್ರಣವನಾನಂದ ಸ್ವಾಮೀಜಿ ಜಿದ್ದಿಗೆ ಬಿದ್ದು  ಸ್ಥಳೀಯ ಶಾಸಕ ಅರುಣಕುಮಾರ ಪುಜಾರ್ ಜೊತೆ ಮಾಲಾರ್ಪಣೆ ಮಾಡಲು ಆಗಮಿಸಿದ್ದರು. ಈ ವೇಳೆ ಕುಪಿತಗೊಂಡ ಗ್ರಾಮಸ್ಥರು ನೀವೂ ನಮ್ಮ ಸ್ವಾಮಿಯಲ್ಲ, ನಮ್ಮೂರಿಂದ ಹೊರಹೋಗಬೇಕು ಎಂದು ಆಗ್ರಹಿಸಿದ್ದಾರೆ. ಹೀಗಾಗಿ ಸ್ವಾಮೀಜಿ ಹಾಗೂ  ಗ್ರಾಮಸ್ಥರ ಮಧ್ಯೆ ತೀವ್ರತರವಾದ ವಾಗ್ವಾದ ನಡೆದಿದೆ. 

ನಿಂತಿದ್ದ ಚಕ್ಕಡಿ ಮೇಲೆ ಶವವಿಟ್ಟು ಹೋದ ಸಿಬ್ಬಂದಿ

ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಎರಡೂ ನೂರಕ್ಕೂ ಅಧಿಕ ಪೋಲಿಸರು ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ. ಗ್ರಾಮಸ್ಥರು ಈಗಾಗಲೇ ಮಠಕ್ಕೆ ಬೀಗ ಹಾಕಿ ಸ್ವಾಮೀಜಿಗೆ ಘೇರಾವ್ ಹಾಕಿದ್ದಾರೆ. ಏನೆ ಮಾಡಿದರೂ ಸರಿ ನಾನು ಮಾಲೆ ಹಾಕೇ ಹಾಕುತ್ತೇನೆ ಎಂದು ಸ್ವಾಮೀಜಿ  ಹಠ ಹಿಡಿದಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 
 

PREV
click me!

Recommended Stories

ಸರ್ಕಾರದ ₹5 ಕೋಟಿ ಕಳಪೆ ಕಾಮಗಾರಿ; ರಾಜಕಾಲುವೆ ಮುಂದೆ ಕಟ್ಟಿಕೊಂಡು ಹೋಗ್ತಿದ್ದರೆ, ಹಿಂದೆ ಬಿದ್ದುಕೊಂಡು ಬರ್ತಿದೆ!
ಮಂಡ್ಯದಲ್ಲಿ ಎಣ್ಣೆ ಮತ್ತಿನಲ್ಲಿ ಸರಣಿ ಅಪಘಾತ, ಕಾರು ಪಲ್ಟಿ; ಕುಡುಕ ಡ್ರೈವರ್‌ನನ್ನು ಹಿಡಿದು ಕಜ್ಜಾಯ ಕೊಟ್ಟ ಜನ!