ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಲು ಕುಟುಂಬಸ್ಥರೇ ಕಾರಣ !

Published : Aug 24, 2019, 01:16 PM IST
ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಲು ಕುಟುಂಬಸ್ಥರೇ ಕಾರಣ !

ಸಾರಾಂಶ

ಜಾರಕಿಹೊಳಿ ಕುಟುಂಬವು ದಶಕಗಳ ಬಳಿಕ ಸಚಿವ ಸ್ಥಾನದಿಂದ ಮೊದಲ ಬಾರಿಗೆ ವಂಚಿತವಾಗಿದೆ. ಇದಕ್ಕೆ ಇವರ ಕುಟುಂಬ ಸದಸ್ಯರೋರ್ವರೆ ಕಾರಣ ಎನ್ನಲಾಗಿದೆ. 

ಬೆಳಗಾವಿ (ಆ.24) :  ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ತಪ್ಪಲು ಅಳಿಯ ಅಂಬಿರಾಯ ಕಾರಣವಾದರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ಬಿಜೆಪಿ ಸರಕಾರದಲ್ಲಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ಕೊಡಲಿಸಲು ಮುಂದಾಗಿ, ತಮ್ಮ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎನ್ನುವ ಆರೋಪ ರಮೇಶ್ ಜಾರಕಿಹೊಳಿಗೆ ಎದುರಾಗಿದೆ. ಈ ಮಾತು ಇದೀಗ ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. 

ಬಾಲಚಂದ್ರ ಜಾರಕಿಹೊಳಿ ಹಾಗೂ ಅಂಬಿರಾಯ ಪಾಟೀಲ್ ನಡುವೆ ವೈಮನಸ್ಸು ಇದ್ದು ಇದೇ ಕಾರಣದಿಂದ  ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪುವಂತೆ ರಮೇಶ್ ಜಾರಕಿಹೊಳಿ ಯತ್ನಿಸಿದರಾ ಎನ್ನುವ  ಪ್ರಶ್ನೆ ಎದ್ದಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೊದಲಿನಿಂದಲೂ ಅಂಬಿರಾಯ ಪಾಟೀಲ್ ಹೇಳುವುದನ್ನೇ ಕೇಳಿಕೊಂಡು ಬಂದಿದ್ದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಲಕ್ಷ್ಮಣ್ ಸವದಿಯನ್ನು ಸಚಿವ ಸ್ಥಾನದಲ್ಲಿ ಕೂರಿಸಲು ಯತ್ನಿಸಿದರು ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಗೆ ಅಂಬಿರಾಯನೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ.

PREV
click me!

Recommended Stories

Ballari News: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿ ರೇಣುಕಾಸ್ವಾಮಿಯಂತೆ ಕಾಲುವೆ ಪಕ್ಕದಲ್ಲಿ ಬೀದಿ ಹೆಣವಾದ ಬಸವನಗೌಡ!
Shivamogga: ಹಿರಿಯ ಪತ್ರಕರ್ತನ ಹೆಂಡತಿ ನಿಗೂಢ ಸಾವು; ದೇವರ ಕೋಣೆಯಲ್ಲಿ ಹೆಣ ಕೊಳೆತು ನಾರಿದರೂ ಗೊತ್ತೇ ಆಗಲಿಲ್ಲ!