ಮಡಿವಾಳ ಸಮುದಾಯ SCಗೆ ಸೇರಿಸಲು ಅಧಿವೇಶನದಲ್ಲಿ ಗಮನ ಸೆಳೆಯುವೆ: ಸಿಂಗ್‌

Kannadaprabha News   | Asianet News
Published : Feb 27, 2021, 01:26 PM IST
ಮಡಿವಾಳ ಸಮುದಾಯ SCಗೆ ಸೇರಿಸಲು ಅಧಿವೇಶನದಲ್ಲಿ ಗಮನ ಸೆಳೆಯುವೆ: ಸಿಂಗ್‌

ಸಾರಾಂಶ

ಮಡಿವಾಳ ಸಮಾಜದಿಂದ ಬಟ್ಟೆ ತೊಳೆಯಲು ಎರಡು ಎಕರೆ ಜಮೀನು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನ| ಸಮಾಜದಲ್ಲಿ ನಾನಾ ರೀತಿಯಲ್ಲಿ ಹಿಂದುಳಿದ ಮಡಿವಾಳ ಸಮಾಜವನ್ನು ಪ.ಜಾತಿಗೆ ಸೇರಿಸಲು ಅಧಿವೇವೇಶನದಲ್ಲಿ ಧ್ವನಿಯಾಗುತ್ತೇನೆ:ಆನಂದ್‌ ಸಿಂಗ್‌|

ಹೊಸಪೇಟೆ(ಫೆ.27): ಮಡಿವಾಳ ಸಮುದಾಯವನ್ನು ಎಸ್ಸಿ ಮೀಸಲಾತಿಯಲ್ಲಿ ಸೇರಿಸಲು ಅಧಿವೇಶನದಲ್ಲಿ ಗಮನ ಸೆಳೆಯುವೆ ಎಂದು ಸಚಿವ ಆನಂದ್‌ ಸಿಂಗ್‌ ಹೇಳಿದ್ದಾರೆ. 

ಅಖಿಲ ಭಾರತ ಮಡಿವಾಳ ಮಹಸಭಾದಿಂದ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಮಡಿವಾಳ ಮಾಚಿದೇವರ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಡಿವಾಳ ಸಮಾಜದಿಂದ ಬಟ್ಟೆ ತೊಳೆಯಲು ಎರಡು ಎಕರೆ ಜಮೀನು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಸಮಾಜದಲ್ಲಿ ನಾನಾ ರೀತಿಯಲ್ಲಿ ಹಿಂದುಳಿದ ಮಡಿವಾಳ ಸಮಾಜವನ್ನು ಪ.ಜಾತಿಗೆ ಸೇರಿಸಲು ಅಧಿವೇವೇಶನದಲ್ಲಿ ಧ್ವನಿಯಾಗುತ್ತೇನೆ ಎಂದು ಆಶ್ವಾಸನೆ ನೀಡಿದರು.

ಬಿಜೆಪಿ ನಾಯಕರು ಬಡವರ ರಕ್ತಹೀರುವ ಜಿಗಣಿ-ಜಿರಲೆಗಳು: ಉಗ್ರಪ್ಪ

ಅಖಿಲ ಭಾರತ ಮಡಿವಾಳ ಮಹಸಭಾ ರಾಷ್ಟ್ರೀಯ ಅಧ್ಯಕ್ಷ ಎಂ. ಜಯರಪ್ಪ ಮಾತನಾಡಿ, ಆರ್ಥಿಕ, ಶಿಕ್ಷಣಿಕ, ರಾಜಕೀಯವಾಗಿ ಬೆಳೆಯಲು ಪ.ಜಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು. ಚಿತ್ರದುರ್ಗದ ಮಾಚಿದೇವ ಮಾಹಸಂಸ್ಥಾನ ಮಠದ ಡಾ. ಬಸವಮಾಚಿದೇವ ಸ್ವಾಮಿ ಸಾನಿಧ್ಯ ವಹಿಸಿದರು.

ಮಾಚಿದೇವಾ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಅರುಣ್‌ಕುಮಾರ್‌, ಹೊಸಪೇಟೆ ತಾಲೂಕು ಅಧ್ಯಕ್ಷ ಎ. ರಾಜಕುಮಾರ್‌, ಮುಂಖಡರಾದ ಭರತ್‌ಕುಮಾರ್‌, ಎ. ಪಂಪಣ್ಣ, ಶ್ರೀನಿವಾಸ್‌, ಚನ್ನಪ್ಪ, ಗಣೇಶ್‌, ರೇವಣಸಿದ್ದಪ್ಪ ಮತ್ತಿತರರಿದ್ದರು.
 

PREV
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ