ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟ : 63 ಪ್ರಕರಣ ವರದಿ

Kannadaprabha News   | Asianet News
Published : Mar 06, 2020, 10:10 AM IST
ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟ : 63 ಪ್ರಕರಣ ವರದಿ

ಸಾರಾಂಶ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ವರದಿಯಾಗಿದೆ. ಇದುವರೆಗೆ ಒಟ್ಟು 63 ಮಂದಿಗೆ ಸೋಂಕು ತಗುಲಿದೆ. 

ಶಿವಮೊಗ್ಗ [ಮಾ.06]: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ವರ್ಷ ಮರಣ ಮೃದಂಗ ಬಾರಿಸಿದ್ದ ಮಂಗನ ಕಾಯಿಲೆ ಮತ್ತೆ ಈ ವರ್ಷವೂ ಅಟ್ಟಹಾಸ ಮೆರೆಯುತ್ತಿದೆ. 

ಇದೀಗ ತೀರ್ಥಹಳ್ಳಿ ತಾಲೂಕಿನ ಮತ್ತೋರ್ವ ವ್ಯಕ್ತಿಗೆ ಮಂಗನ ಕಾಯಿಲೆ ಕಾಣಿಸಿಕೊಂಡು ಕಳವಳ ಉಂಟು ಮಾಡಿದೆ. 

ಮತ್ತೆ ಕಾಣಿಸಿಕೊಂಡಿದೆ ಮಹಾಮಾರಿ ಮಂಗನ ಕಾಯಿಲೆ : ಎಚ್ಚರ!..

ತೀರ್ಥಹಳ್ಳಿ ತಾಲೂಕಿನಾದ್ಯಂತ ಗ್ರಾಮದ ಮಂಜುನಾಥ [34] ಎಂಬ ವ್ಯಕ್ತಿಗೆ ಕೆಎಫ್ ಡಿ ಸೋಂಕು ತಗುಲಿದ್ದು, ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಇದುವರೆಗೂ ತೀರ್ಥಹಳ್ಳಿ ತಾಲೂಕೊಂದರಲ್ಲಿ 63 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ. 

PREV
click me!

Recommended Stories

Modern Muslim League: ಕಾಂಗ್ರೆಸ್‌ ಆಧುನಿಕ ಮುಸ್ಲಿಂ ಲೀಗ್‌; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ!
ಹಿಜಾಬ್ ಸಮಾನತೆ ಸಂಕೇತ, ಕೇಸರಿ ಶಾಲು ಹಾಕಿ ಶಾಲೆಗೆ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಕೆ!