ಕೊಡಗು: ಅಡಿಕೆ ಕದಿಯಲು ಬಂದವ ಗುಂಡೇಟು ತಿಂದು ಸತ್ತ

Published : Aug 30, 2019, 07:12 PM IST
ಕೊಡಗು: ಅಡಿಕೆ ಕದಿಯಲು ಬಂದವ ಗುಂಡೇಟು ತಿಂದು ಸತ್ತ

ಸಾರಾಂಶ

ಅಡಿಕೆ ಕದಿಯಲು ಬಂದಿದ್ದ ಕಳ್ಳನೊಬ್ಬನ ಮೇಲೆ ಮನೆಯ ಮಾಲೀಕ ಫೖರಿಂಗ್| ಅಡಿಕೆ ಕದಿಯಲು ಬಂದವ ಗುಂಡೇಟು ತಿಂದು ಸತ್ತ|ಕೊಡಗು ಜಿಲ್ಲೆಯ ಕರಿಕೆ ಎಂಬಲ್ಲಿ ನಡೆದ ಘಟನೆ.

ಕೊಡಗು, [ಆ.30]: ಅಡಿಕೆ ಕದಿಯಲು ಬಂದಿದ್ದ ಕಳ್ಳನೊಬ್ಬನ ಮೇಲೆ ಮನೆಯ ಮಾಲೀಕ ಗುಂಡು ಹಾರಿಸಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕರಿಕೆ ಎಂಬಲ್ಲಿ ನಡೆದಿದೆ.

ದೇವಂಗೋಡಿ ನಿವಾಸಿ ಗಣೇಶ್​ ಮೃತಪಟ್ಟವರು. ಮಂಡೇಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್​ ಗುರುವಾರ ರಾತ್ರಿ ಬಂದಿದ್ದಾನೆ.

ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರು ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡ ತಲುಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ವಿಷಯ ತಿಳಿದ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

PREV
click me!

Recommended Stories

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ
Karnataka SIR: ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ