ಬೆಂಗಳೂರು ಪಬ್‌ಗೆ ನುಗ್ಗಿದ ಮುಸುಕುಧಾರಿ, ಪಿಸ್ತೂಲ್ ತೋರಿಸಿ 50 ಸಾವಿರ ಕದ್ದ! ಕಾರಣ ಮಾಲೀಕರೇ?

Published : May 13, 2025, 04:47 PM ISTUpdated : May 13, 2025, 05:21 PM IST
ಬೆಂಗಳೂರು ಪಬ್‌ಗೆ ನುಗ್ಗಿದ ಮುಸುಕುಧಾರಿ, ಪಿಸ್ತೂಲ್ ತೋರಿಸಿ 50 ಸಾವಿರ ಕದ್ದ! ಕಾರಣ ಮಾಲೀಕರೇ?

ಸಾರಾಂಶ

ಸುಬ್ರಮಣ್ಯನಗರದ ಪಬ್‌ನಲ್ಲಿ ಮುಸುಕುಧಾರಿ ಕಳ್ಳ ₹50,000 ದೋಚಿ ಪರಾರಿಯಾಗಿದ್ದಾನೆ. ಸೆಕ್ಯುರಿಟಿ ಗಾರ್ಡ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿ, ಕ್ಯಾಶ್ ಕೌಂಟರ್‌ ಲೂಟಿ ಮಾಡಿದ್ದಾನೆ. ಪೊಲೀಸರು ನಾಲ್ಕು ತನಿಖಾ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿ ಪಬ್‌ನ ಹಳೆಯ ಉದ್ಯೋಗಿ ಎಂದು ಶಂಕಿಸಲಾಗಿದೆ.

ಬೆಂಗಳೂರು ನಗರದಲ್ಲಿನ ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಮುಂಜಾನೆ ನಡೆದಿರುವ ಸಿನಿಮೀಯ ಶೈಲಿಯ ಕಳ್ಳತನವೊಂದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ರಾಜಾಜಿನಗರದ "ಜೊಮೆಟ್ರಿ ಬ್ರಿವೇರಿ ಆ್ಯಂಡ್ ಕಿಚನ್‌" ಎಂಬ ಪಬ್‌ಗೆ ಮುಂಜಾನೆ 4 ಗಂಟೆ ಸುಮಾರಿಗೆ ಮುಸುಕು ಧರಿಸಿದ್ದ ಅಪರಿಚಿತ ವ್ಯಕ್ತಿ ನುಗ್ಗಿ, ಸೆಕ್ಯುರಿಟಿ ಗಾರ್ಡ್‌ಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ಆ ಬಳಿಕ ಕ್ಯಾಶ್ ಕೌಂಟರ್‌ನಲ್ಲಿದ್ದ ₹50,000 ನಗದನ್ನು ಕಳವುಮಾಡಿ ದುರಂತಕಾರಿಯೊಬ್ಬನು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಭದ್ರತಾ ಸಿಬ್ಬಂದಿಯ ಸಹಿತ ಪಬ್ ಸಿಬ್ಬಂದಿಗೆ ಭೀತಿ ಉಂಟಾಗಿದೆ.

ಪಬ್‌ನ ಮೇಲ್ವಿಚಾರಕ ವಿನಯ್ ಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಾಧಿಯನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಶೋಧ ಕಾರ್ಯಾಚರಣೆಗೆ  4 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಗುರುತು ಹಿಡಿಯುವ ಕೆಲಸ ಜೋರಿನಿಂದ ಸಾಗುತ್ತಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಭದ್ರತಾ ವ್ಯವಸ್ಥೆ ಬಗ್ಗೆ ಹಲವು ಪ್ರಶ್ನೆಗಳು  ಎದ್ದಿದೆ.

ಈ ನಡುವೆ ತನಿಖೆ ವೇಳೆ ಪಬ್ ಗೆ ಬಂದಿದ್ದ ಆರೋಪಿ ಪಬ್ ನ ಹಳೇ ಎಂಪ್ಲಾಯ್ ಅನ್ನೋದು ಬೆಳಕಿಗೆ ಬಂದಿದೆ. ಈ ಹಿಂದೆ ಇದೇ ಪಬ್ ನಲ್ಲಿ ಕೆಲಸ ಮಾಡ್ತಿದ್ದ ಆರೋಪಿಗೆ ಸ್ಯಾಲರಿ ವಿಚಾರದಲ್ಲಿ ಪಬ್ ಮಾಲೀಕರ ಜೊತೆ ಕಿರಿಕ್  ಇತ್ತು. ಸ್ಯಾಲರಿ ನೀಡದಿದ್ದ  ಕಾರಣಕ್ಕೆ ಪಬ್ ನ ಕ್ಯಾಶ್ ಕೌಂಟರ್ ಗೆ ಕನ್ನ ಹಾಕಿದ್ದಾನೆ ಎಂದು ತಿಳಿದುಬಂದದೆ. ಸೆಕ್ಯೂರಿಟಿ ಗಾರ್ಡ್ ಗೆ ಪಿಸ್ತೂಲ್ ತೋರಿಸಿ ಬೆದರಿಸಿ  ಪಬ್‌ ಒಳಗೆ ಎಂಟ್ರಿ ಕೊಟ್ಟಿದ್ದ, ಪೊಲೀಸರ ತನಿಖೆ ವೇಳೆ ಆರೋಪಿ ಉತ್ತರ ಭಾರತ ಮೂಲದವನು ಅನ್ನೋ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಪಬ್ ಮಾಲೀಕರು ಹಾಗೂ ಸಿಬ್ಬಂದಿಯಿಂದ  ಪೊಲೀಸರು ಮಾಹಿತಿ ಪಡೆದಿದ್ದಾರೆ. ಇನ್ನೊಂದು ಕಡೆ ಆರೋಪಿ ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರವಾಗಿ ಶೋಧ ಕಾರ್ಯಾಚರಣೆ  ನಡೆಸುತ್ತಿದ್ದಾರೆ.

ಏನಿದು ಘಟನೆ?

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಈ ಪಬ್‌ ಇದೆ. ಸೋಮವಾರ ಮುಂಜಾನೆ 4 ಗಂಟೆಗೆ ಮುಖಕ್ಕೆ ಕಪ್ಪು ಬಣ್ಣದ ಮಾಸ್ಕ್‌, ಕೈಗೆ ಗ್ಲೌಸ್‌ ಧರಿಸಿದ್ದ ಕಳ್ಳ ಪಬ್‌ನ ಅಡುಗೆ ಕೋಣೆಯ ಕಿಟಕಿಯ ಮೆಸ್‌ ಕತ್ತರಿಸಿ ಬಳಿಕ ಕಿಟಕಿಯಲ್ಲಿ ಕೈ ತೂರಿಸಿ ಬಾಗಿಲ ಬೋಲ್ಟ್‌ ತೆಗೆದು ಒಳಗೆ ನುಗ್ಗಿದ್ದಾನೆ. ಈ ವೇಳೆ ಪಬ್‌ ಒಳಗೆ ಶಬ್ದವಾದ ಹಿನ್ನೆಲೆಯಲ್ಲಿ ಕಟ್ಟಡದ ಇಬ್ಬರು ಸೆಕ್ಯುರಿಟಿ ಗಾರ್ಡ್‌ಗಳ ಪೈಕಿ ಓರ್ವ ಒಳಗೆ ಬರುತ್ತಿದ್ದಂತೆ ಕಳ್ಳ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ಬಳಿಕ ಸಿಸಿಟಿವಿ ಕ್ಯಾಮರಾಗಳನ್ನು ಆಫ್‌ ಮಾಡಿ ಕ್ಯಾಶ್‌ ಕೌಂಟರ್‌ ಬಳಿ ತೆರಳಿ 50 ಸಾವಿರ ರು. ನಗದು ಕಳವು ಮಾಡಿ ಮೊದಲ ಅಂತಸ್ತಿನ ಕಟ್ಟಡದ ಕಿಟಕಿಯಿಂದ ಹೊರಗೆ ಬಂದು ಪರಾರಿಯಾಗಿದ್ದಾನೆ.

112 ಸಹಾಯವಾಣಿಗೆ ಕರೆ:

ಈ ವೇಳೆ ಭಯಗೊಂಡ ಸೆಕ್ಯೂರಿಟಿ ಗಾರ್ಡ್‌ ತಕ್ಷಣ 112 ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಅಷ್ಟರಲ್ಲಿ ರಾತ್ರಿ ಗಸ್ತಿನಲ್ಲಿ ಹೊಯ್ಸಳ ಸಿಬ್ಬಂದಿ ಹಾಗೂ ಸುಬ್ರಮಣ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಕ್ಷಿಪ್ರ ಕಾರ್ಯ ಪಡೆ ಕರೆಸಿಕೊಂಡು ಇಡೀ ಕಟ್ಟಡವನ್ನು ಸುತ್ತುವರಿದು ನಾಲ್ಕು ಅಂತಸ್ತುಗಳನ್ನು ಶೋಧಿಸಿದ್ದಾರೆ. ಆದರೆ ಕಟ್ಟಡದೊಳಗೆ ಯಾರು ಇಲ್ಲದಿರುವುದು ಕಂಡು ಬಂದಿದೆ.

ಸಿಸಿಟಿವಿಯಲ್ಲಿ ಚಲನವಲನ ಸೆರೆ:

ಈ ನಡುವೆ ವಿಷಯ ತಿಳಿದು ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅದಾವತ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಶ್‌ ಕುಮಾರ್‌ ವಿಕಾಶ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಪಬ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಮುಸುಕುಧಾರಿ ಕಳ್ಳ ಪಬ್‌ ಪ್ರವೇಶಿಸಿರುವುದಷ್ಟೇ ಸೆರೆಯಾಗಿದೆ. ವೃತ್ತಿಪರ ಕಳ್ಳನೇ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸುಬ್ರಮಣ್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ ನೀಡಿದ ಮಾಹಿತಿ ಮೇರೆಗೆ ಇಡೀ ಕಟ್ಟಡವನ್ನು ಸುತ್ತುವರಿದು ಪರಿಶೀಲಿಸಲಾಗಿದೆ. ಆದರೆ, ಕಟ್ಟಡದೊಳಗೆ ಯಾರೂ ಪತ್ತೆಯಾಗಿಲ್ಲ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಪಬ್‌ನಲ್ಲಿ ಓಡಾಡಿರುವ ದೃಶ್ಯ ಮಾತ್ರ ಸೆರೆಯಾಗಿದೆ. ಆತ ಕೈಯಲ್ಲಿ ಪಿಸ್ತೂಲ್‌ ಹಿಡಿದಿರುವುದು ಕಂಡು ಬಂದಿಲ್ಲ. ಈ ಸಂಬಂಧ ತನಿಖೆ  ಮುಂದುವರೆದಿದೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ