ಪ್ರವಾಹದ ವಿಷಯದಲ್ಲಿಯೂ ರಾಜಕೀಯ ಮಾಡಿದ ಬಾಗಲಕೋಟೆ ಶಾಸಕ

Published : Aug 13, 2019, 02:16 PM ISTUpdated : Aug 13, 2019, 02:17 PM IST
ಪ್ರವಾಹದ ವಿಷಯದಲ್ಲಿಯೂ ರಾಜಕೀಯ ಮಾಡಿದ ಬಾಗಲಕೋಟೆ ಶಾಸಕ

ಸಾರಾಂಶ

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ಜನರು ನಲುಗುತ್ತಿದ್ದರೆ. ಕೆಲ ರಾಜಕೀಯ ನಾಐಕರು ಮಾತ್ರ ತಮ್ಮ ರಾಜಕೀಯ ನಿಲ್ಲಿಸಿಲ್ಲ. ಬಿಜೆಪಿ ಶಾಸಕರೋರ್ವರು ಪ್ರವಾಹ ಸಂತ್ರಸ್ತರ ಎದುರಲ್ಲೆ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬಾಗಲಕೋಟೆ [ಆ.13]: ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಡುವೆ ನೆರೆ ಪೀಡಿತ ಪ್ರದೇಶಕ್ಕೆ ತೆರಳಿದ ಬಿಜೆಪಿ ಶಾಸಕರೋರ್ವರ  ಕಷ್ಟದ ಸಮಯದಲ್ಲೂ ತಮ್ಮ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿ, ಅವರು ಸುಳ್ಳು ಭರವಸೆಗಳನ್ನು ನೀಡಿ ಹೋಗುತ್ತಾರೆ. ನೀವು ಅವರನ್ನೇ ನಂಬಿಕೊಂಡು ಕೂರುತ್ತೀರಿ ಎಂದಿದ್ದಾರೆ.

ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ  ನಗರದ ಎಸ್ ಸಿ ಕಾಲೋನಿಗೆ ಭೇಟಿ ನೀಡಿದ್ದ ಹೇಳಿಕೆ ಎಲ್ಲೆಡೆ ವೈರಲ್ ಆಗಿದೆ. ಶಾಸಕರು ತಮ್ಮ ಪ್ರದೇಶಕ್ಕೆ ಆಗಮಿಸಿದ್ದ ವೇಳೆ  ಸಾಹೇಬ್ರೆ ನಮ್ಗೇ ಹಕ್ಕು ಪತ್ರ ಕೊಡ್ಸಿ ಎಂದು ಕೇಳಿದ ಸಂತ್ರಸ್ತರ ಎದುರಿನಲ್ಲೇ ಸಾಂತ್ವನದ ಮಾತು ಬಿಟ್ಟು  ಕೈ ನಾಯಕರ ವಿರುದ್ಧ ವಾಕ್ ಪ್ರಹಾರ ನಡೆಸಿ ಹೋಗಿದ್ದಾರೆ.    

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾಂಗ್ರೆಸಿನವರು ನಿಮಗಾಗಿ ಏನು ಮಾಡಿದ್ದಾರೆ. ಆದರೆ ನೀವು ಮಾತ್ರ ಅಂತವರನ್ನೇ ನಂಬಿಕೊಂಡು ಕುಳಿತಿದ್ದೀರಿ ಎಂದಿದ್ದಲ್ಲೇ ವಿವಾದಾತ್ಮಕ ಹೇಳಿಕೆಗಳನ್ನೂ ಶಾಸಕರು ನೀಡಿದ್ದಾರೆ. ಈ ಮೂಲಕ ಪ್ರವಾಹದ ಸ್ಥಳದಲ್ಲಿಯೂ ರಾಜಕೀಯ ಮಾಡಿದ್ದಾರೆ. 

PREV
click me!

Recommended Stories

ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!
ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?