ವಿಲೇವಾರಿ ಬಾಕಿ ಉಳಿದಿರುವ 5141 ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಉಚಿತ 10 ಕೆಜಿ ಅಕ್ಕಿ ವಿತರಣೆ| ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಪ್ರತಿ ತಿಂಗಳು ನೀಡಲಾಗುತ್ತದೆ: ಡಿಸಿ ಡಾ. ಕೆ . ರಾಜೇಂದ್ರ| ಅರ್ಜಿದಾರರು ಅರ್ಜಿ ಹಾಕಿದ ನಕಲು ಪ್ರತಿಯನ್ನು ನ್ಯಾಯಬೆಲೆ ಅಂಗಡಿಗೆ ನೀಡಿ ಆಹಾರಧಾನ್ಯ ಪಡೆಯುವಂತೆ ಡಿಸಿ ಆದೇಶ|
ಬಾಗಲಕೋಟೆ(ಏ.13): ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ವಿಲೇವಾರಿ ಬಾಕಿ ಉಳಿದಿರುವ 5141 ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಪ್ರತಿ ತಿಂಗಳು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ . ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ 76 ಎಪಿಎಲ್ ಅರ್ಜಿಗಳ ಅರ್ಜಿದಾರರಿಗೂ ಸಹಾಯಧನ ದರ ಪ್ರತಿ ಕೆಜಿಗೆ 15 ರು. ದರದಲ್ಲಿ ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.