Umesh Meti Kodimath visit: ಕೋಡಿಮಠ ಶ್ರೀಗಳಗೆ ಬೆಳ್ಳಿ ಕೀರಿಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ

Kannadaprabha News   | Kannada Prabha
Published : May 09, 2026, 07:43 AM IST
Bagalkote New MLA Umesh Meti Presents Silver Crown to Kodimath Sri

ಸಾರಾಂಶ

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕ ಉಮೇಶ್ ಮೇಟಿ, ಅರಸೀಕೆರೆಯ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿದರು. ಅವರು ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರಿಗೆ ಬೆಳ್ಳಿ ಕಿರೀಟ ಅರ್ಪಿಸಿ, ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆಸಿದರು.

 ಅರಸೀಕೆರೆ ಮೇ.9): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನೂತನ ಶಾಸಕ ಉಮೇಶ್ ಮೇಟಿ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಬೆಳ್ಳಿ ಕಿರೀಟ ಅರ್ಪಿಸಿ ಆಶೀರ್ವಾದ ಪಡೆದರು.

ಗುರುವಾರ ರಾತ್ರಿ ಮಠಕ್ಕೆ ಆಗಮಿಸಿದ ಉಮೇಶ್ ಮೇಟಿ ಮಠದಲ್ಲಿನ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ವಾಮೀಜಿಗೆ ರಜತ ಕಿರೀಟ ಧಾರಣೆ ಮಾಡಿ ಭಕ್ತಿಭಾವ ಸಮರ್ಪಿಸಿದರು. ಉಮೇಶ್ ಮೇಟಿ ಹಾಗೂ ಶ್ರೀಗಳ ನಡುವೆ 1 ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆದಿರುವುದು ವಿಶೇಷ ಗಮನ ಸೆಳೆಯಿತು. 

ಇದನ್ನೂ ಓದಿ: Blackmail Utsav: ಯಾವ ಪುರುಷಾರ್ಥಕ್ಕೆ ಯಡಿಯೂರಪ್ಪ ಅಭಿಮಾನೋತ್ಸವ? ಯತ್ನಾಳ್ ಟೀಕೆ

ರಾಜಕೀಯವಾಗಿ ತಮ್ಮ ಮುಂದಿನ ನಡೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ವಿಚಾರಗಳ ಕುರಿತು ಶ್ರೀಗಳ ಮಾರ್ಗದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಮಠದ ಮೂಲಗಳಿಂದ ತಿಳಿದುಬಂದಿದೆ.

PREV
Read more Articles on
click me!

Recommended Stories

ಚಾಮರಾಜನಗರ: ಸಲೂನ್‌ಗೆ ಬಂದ ಮಂಗಕ್ಕೆ ಹೇರ್‌ ಕಟ್ ಮಾಡಿಸಿದ ಕ್ಷೌರಿಕ!
ಕಾಣೆಯಾಗಿದ್ದ 1.5 ವರ್ಷದ ಮಗು, ಇಡೀ ರಾತ್ರಿ ಕತ್ತಲು, ಮಳೆಗೆ ಹಳ್ಳದಲ್ಲೇ ಕೂತಿದ್ದ ಕಂದನ ಪೊಲೀಸರು ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?