ಆಸ್ತಿ ತೆರಿಗೆ ಬಾಕಿ ಇದ್ದರೆ ಡಿ.1ರಿಂದ ಕಟ್ಟಡಕ್ಕೆ ಬೀಗ..!

Published : Nov 12, 2024, 09:07 AM IST
ಆಸ್ತಿ ತೆರಿಗೆ ಬಾಕಿ ಇದ್ದರೆ ಡಿ.1ರಿಂದ ಕಟ್ಟಡಕ್ಕೆ ಬೀಗ..!

ಸಾರಾಂಶ

ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿ ತಪ್ಪು ಮಾಹಿತಿ ನೀಡಿ ನಂತರ ಪರಿಷ್ಕರಣೆ ಮಾಡಿಕೊಂಡಿರುವ ಪ್ರಕರಣಗಳಲ್ಲಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಬೇಕು. ಅದಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 

ಬೆಂಗಳೂರು(ನ.12):  ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ, ಬಾಕಿ ತೆರಿಗೆ ವಸೂಲಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಆಸ್ತಿ ತೆರಿಗೆ ಸಂಗ್ರಹ ಸೇರಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ (ಎಸ್‌ಎಎಸ್) ಅಡಿ ತಪ್ಪು ಮಾಹಿತಿ ನೀಡಿ ನಂತರ ಪರಿಷ್ಕರಣೆ ಮಾಡಿಕೊಂಡಿರುವ ಪ್ರಕರಣಗಳಲ್ಲಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಬೇಕು. ಅದಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

17 ವರ್ಷಗಳಿಂದ ವಿಧಾನಸೌಧ, ವಿಕಾಸಸೌಧದ ಆಸ್ತಿ ಶುಲ್ಕ ಬಾಕಿ!

ನ. 30ಕ್ಕೆ ಒಟಿಎಸ್ ಮುಕ್ತಾಯ: 

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆ ಅಡಿ ಆಸ್ತಿ ತೆರಿಗೆ ಬಾಕಿ ಪಾವತಿಸುವವರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗುತ್ತಿದೆ. ಈ ಯೋಜನೆ ನ.30ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಇದರ ಬಗ್ಗೆ ಸುಸ್ತಿದಾರರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಅಲ್ಲದೆ, ಡಿ.1ರಿಂದ ಅವರು ಪಾವತಿಸಬೇಕಿರುವ ಬಾಕಿ ತೆರಿಗೆ ದುಪ್ಪಟ್ಟಾಗಲಿದೆಎಂಬುದನ್ನೂ ತಿಳಿಸಬೇಕು. ಅದಕ್ಕಾಗಿ ವಲಯವಾರು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರು ತಿಳಿಸಿದರು. 

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌನ್ಸಿಲ್, ಸುರಳ್ಳರ್ ವಿಕಾಸ್ ಕಿಶೋರ್, ಡಾ. ಕೆ.ಹರೀಶ್‌ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಲ್ಲೋಟ್ ಇತರರಿದ್ದರು.

PREV
Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!