ಸಂಕ್ರಾಂತಿ ವೇಳೆ ಬಿಬಿಎಂಪಿ ಜನರಿಗೆ ಕೊಟ್ಟ ಎಚ್ಚರಿಕೆ.. ತಪ್ಪಿದ್ರೆ!

Published : Jan 14, 2019, 07:36 PM IST
ಸಂಕ್ರಾಂತಿ ವೇಳೆ ಬಿಬಿಎಂಪಿ ಜನರಿಗೆ ಕೊಟ್ಟ ಎಚ್ಚರಿಕೆ.. ತಪ್ಪಿದ್ರೆ!

ಸಾರಾಂಶ

ಸಂಕ್ರಾಂತಿ ಹಬ್ಬದ ಸಂಭ್ರಮ ಎದುರಿಗೆ ಇದ್ದರೆ ಇನ್ನೊಂದು ಕಡೆ ಬೆಂಗಳೂರು ಮಹಾನಗರ ಪಾಲಿಕೆ ಜನರಿಗೆ ಒಂದು ಎಚ್ಚರಿಕೆ ನೀಡಿದೆ.

 ಬೆಂಗಳೂರು[ಜ. 14] ಹಬ್ಬ ಬಂತೆಂದೂ ಸಂಭ್ರಮಿಸುವುದು ಸರಿ. ಸಂಭ್ರಮದ ನಂತರ ಉಂಟಾಗುವ ತ್ಯಾಜ್ಯ, ಕಸ, ಹೂವಿನ ರಾಶಿ, ತರಕಾರಿ ಸಿಪ್ಪೆಯನ್ನು ಕಂಡಕಂಡೆ ಬಿಸಾಡಿದರೆ ನೀವೇ ತೆರವು ಮಾಡಬೇಕಾದೀತು ಎಚ್ಚರಿಕೆ.

ದಾರಿಯಲ್ಲಿ ಉಗುಳಿದ ಪುಣೆ ಯುವಕನ ವಿಡಿಯೋ ಕೆಲ ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆತನ ಬಳಿಗೆ ಅವನ ಎಂಜಲನ್ನೇ ಕ್ಲೀನ್ ಮಾಡಿಸಲಾಗಿತ್ತು. ಈಗ ಬಿಬಿಎಂಪಿ ಸಹ ದಿಟ್ಟ ಕ್ರಮಕ್ಕೆ ಮುಂದಾಗಿಉದೆ.

ಸಂಕ್ರಾಂತಿ ಹಬ್ಬದ ಕಸವನ್ನು ಜನರೇ ಕ್ಲೀನ್ ಮಾಡುವಂತೆ ಸೂಚಿಸಿದೆ.  ಕಬ್ಬು, ಹೂವು ಸೇರಿದಂತೆ ಹಲವು ವಸ್ತುಗಳಿಂದ ಉಂಟಾಗುವ ತ್ಯಾಜ್ಯವನ್ನು ಮನೆಯ ಬಳಿ ಬರುವ ಗಾಡಿಗಳಿಗೆ ಹಾಕಬೇಕು. ಬದಲಾಗಿ ರಸ್ತೆಯಲ್ಲಿ ಅಥ್ವಾ ಬ್ಲಾಕ್ ಸ್ಪಾಟ್ ಗಳಲ್ಲಿ ಕಸ ಹಾಕಿದರೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.

ಬಿಬಿಎಂಪಿ ಅಪರ ಆಯುಕ್ತ ರಂದೀಪ್. ಡಿ ಸೂಚನೆ ನೀಡಿದ್ದು  ಕಸವನ್ನು ಕ್ಲೀನ್ ಮಾಡದೆ ಹೋದಲ್ಲಿ ಆಯಾ ವಲಯದ ಪಾಲಿಕೆ ಅಧಿಕಾರಿಗಳಿಂದ ದಂಡ ವಿಧಿಸಲಾಗುತ್ತದೆ. ಕಸ ವಿಲೆವಾರಿ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.

 

PREV
click me!

Recommended Stories

Premium FAR and TDR Issues: ಪ್ರೀಮಿಯಂ ಎಫ್​ಎಆರ್​, ಟಿಡಿಆರ್​​ ಕುರಿತು ಸಿಎಂ, ಡಿಸಿಎಂಗೆ ದೂರು
ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್!