ಹಿರೇಕೆರೂರು: ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದ ಸಚಿವ ಪಾಟೀಲ್‌

Kannadaprabha News   | Asianet News
Published : Apr 03, 2021, 12:49 PM IST
ಹಿರೇಕೆರೂರು: ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದ ಸಚಿವ ಪಾಟೀಲ್‌

ಸಾರಾಂಶ

ಆರೋಗ್ಯಾಧಿಕಾರಿ ಅಮಾನತಿಗೆ ಕಾರಣವಾಗಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್‌| ಈ ಬಾರಿ ಸರ್ಕಾರಿ ಆಸ್ಪತ್ರೆಗೆ ಸ್ವತಃ ಅವರೇ ತೆರಳಿ ಲಸಿಕೆ ಹಾಕಿಸಿಕೊಂಡ ಪಾಟೀಲ್‌| ಸಚಿವರು ಮನೆಗೇ ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿಗಳನ್ನು ಕರೆಯಿಸಿಕೊಂಡು ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು| 

ಹಿರೇಕೆರೂರು(ಏ.03):  ಮನೆಯಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಂಡು ವಿವಾದ ಸೃಷ್ಟಿಸಿ ತಾಲೂಕು ಆರೋಗ್ಯಾಧಿಕಾರಿ ಅಮಾನತಿಗೆ ಕಾರಣವಾಗಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕೊನೆಗೂ ಎಚ್ಚೆತ್ತುಕೊಂಡು 2ನೇ ಡೋಸ್‌ ಕೋವಿಡ್‌ ಲಸಿಕೆಯನ್ನು ಆಸ್ಪತ್ರೆಗೆ ತೆರಳಿ ಹಾಕಿಸಿಕೊಂಡಿದ್ದಾರೆ.

ಶುಕ್ರವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಸ್ವತಃ ಅವರೇ ತೆರಳಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಮಾ. 2ರಂದು ಅವರು ಹಾಗೂ ಅವರ ಪತ್ನಿ ಮನೆಗೇ ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿಗಳನ್ನು ಕರೆಯಿಸಿಕೊಂಡು ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. 

ಸಚಿವ ಬಿ.ಸಿ. ಪಾಟೀಲ್‌ ಮನೆಗೆ ಹೋಗಿ ಲಸಿಕೆ, ತಾಲೂಕು ಅಧಿಕಾರಿ ಸಸ್ಪೆಂಡ್‌

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಲಸಿಕಾ ಕೇಂದ್ರದಲ್ಲಿಯೇ ಲಸಿಕೆ ಹಾಕುವ ಬದಲು ಮನೆಗೆ ಹೋಗಿ ಲಸಿಕೆ ಹಾಕುವ ಮೂಲಕ ಕರ್ತವ್ಯ ಲೋಪವೆಸಗಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಝಡ್‌. ಆರ್‌. ಮಕಾನದಾರ ಅವರನ್ನು ಗುರುವಾರ (ಏ.1) ಅಮಾನತು ಮಾಡಿದ್ದರು.

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!