ಬೆಂಗಳೂರು: ರೈಲಿನಿಂದ ಬಿದ್ದು ಮಾಜಿ ಶಾಸಕನ ಪುತ್ರ ಸಾವು

Published : Dec 04, 2018, 10:22 AM ISTUpdated : Dec 04, 2018, 12:49 PM IST
ಬೆಂಗಳೂರು: ರೈಲಿನಿಂದ ಬಿದ್ದು ಮಾಜಿ ಶಾಸಕನ ಪುತ್ರ ಸಾವು

ಸಾರಾಂಶ

ಬೆಳಗಾವಿ ಎಂಇಎಸ್ ಮಾಜಿ ಶಾಸಕರ ಪುತ್ರ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು, [ಡಿ.04]: ಬೆಳಗಾವಿ ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ಸಾಗರ್​ ಪಾಟೀಲ್ (28) ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 

ನಿನ್ನೆ [ಸೋಮವಾರ] ರಾತ್ರಿ ಸ್ನೇಹಿತರ ಜೊತೆ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

"

ಶ್ರೀರಾಮಪುರದಲ್ಲಿ ರೈಲು ಬರುತ್ತಿದ್ದ ವೇಳೆ ಡೋರ್ನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿದೆ. ಬಿದ್ದಿರುವ ರಭಸಕ್ಕೆ ತೆಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಈ ಸಂಬಂಧ ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

PREV
click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!