ಬೆಳಗಾವಿ ₹49 ಕೋಟಿ ವೆಚ್ಚದ ಹೊಸ ಬಸ್ ನಿಲ್ದಾಣ: ವಾಯುವ್ಯಕ್ಕೆ ಬರಲಿವೆ 700 ಎಲೆಕ್ಟ್ರಿಕ್ ಬಸ್ - ಸಿದ್ದರಾಮಯ್ಯ

Published : Oct 05, 2025, 02:48 PM IST
Belagavi New Bus Stand

ಸಾರಾಂಶ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ₹49.20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ನಿಲ್ದಾಣವು ಅತ್ಯಾಧುನಿಕ ಸೌಕರ್ಯಗಳೊಂದಿಗೆ ಪ್ರತಿದಿನ ಸುಮಾರು 96 ಸಾವಿರ ಪ್ರಯಾಣಿಕರಿಗೆ ಸೇವೆ ಸಲ್ಲಿಸಲಿದೆ.

ಬೆಳಗಾವಿ (ಅ.05):  ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ₹49.20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ, ಯಶಸ್ವಿ ಶಕ್ತಿ ಯೋಜನೆಯು ವಿಶ್ವ ದಾಖಲೆಗಳನ್ನು ಪಡೆದಿರುವುದನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು. ಈ ನಿಲ್ದಾಣವು ಅತ್ಯಾಧುನಿಕ ಸೌಕರ್ಯಗಳೊಂದಿಗೆ ಪ್ರತಿದಿನ ಸುಮಾರು 96 ಸಾವಿರ ಪ್ರಯಾಣಿಕರಿಗೆ ಸೇವೆ ಸಲ್ಲಿಸಲಿದೆ ಎಂದು ಮಾಹಿತಿ ನೀಡಿದರು. 

ಸಾರಿಗೆ ಸಂಸ್ಥೆಗಳಲ್ಲಿ ಕಳೆದ ಎರಡುವರೆ ವರ್ಷಗಳಲ್ಲಿ 10,000 ಹೊಸ‌ ನೇಮಕಾತಿ‌ ಮಾಡಲಾಗಿದೆ. 215 ಕ್ಕೂ ಹೆಚ್ಚು ಪ್ರಶಸ್ತಿ‌ ಪುರಸ್ಕಾರಗಳು ದೊರೆತಿವೆ. ಶಕ್ತಿ‌ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಒಟ್ಟು 565.48 ಕೋಟಿ ಮಹಿಳಾ ಟಿಕೇಟ್ ವಿತರಣೆಯಾಗಿದ್ದು, ರೂ.14456 ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆಯು ಎರಡು ವಿಶ್ಚ ದಾಖಲೆಗಳಲ್ಲಿ ಗೋಲ್ಡನ್‌ ‌ಬುಕ್‌ ಆಪ್ ವರ್ಲ್ಡ್ ರೆಕಾರ್ಡ್ಸ್ ( Golden Book of World Records) ಮತ್ತು ಇಂಟರ್ ನ್ಯಾಶನಲ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ ( International Book of World Records ) ಗಳಲ್ಲಿ ಸೇರ್ಪಡೆಯಾಗಿರುವುದು ಶಕ್ತಿ‌‌ ಯೋಜನೆಯ ಯಶಸ್ಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವೆಚ್ಚ 49.20 ಕೋಟಿಗಳು

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ನಗರ ಸಾರಿಗೆ ಬಸ್ ನಿಲ್ದಾಣ ಯೋಜನೆ ವೆಚ್ಚ : 49.20 ಕೋಟಿಗಳು ( ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ 50% ಅನುದಾನ ನೀಡಿದೆ ), ಒಟ್ಟು ವಿಸ್ತೀರ್ಣ : 02 ಎಕರೆ 19 ಗುಂಟೆ ಇದೆ. ಬೆಳಗಾವಿಯಲ್ಲಿ 5 ಎಕರೆ 5 ಗುಂಟೆ ವಿಸ್ತೀರ್ಣದಲ್ಲಿ, ರೂ.24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕ ಸ್ಥಾಪನೆ , ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ 50% ಅನುದಾನ.

ನೂತನ ನಗರ ಸಾರಿಗೆ ಬಸ್‌ ನಿಲ್ದಾಣದಲ್ಲಿ ಒದಗಿಸಿದ ಸೌಕರ್ಯಗಳು- ಬಸ್ ನಿಲ್ದಾಣದಲ್ಲಿ 28 ಅಂಕಣಗಳು,1365 ಸಾರಿಗೆ ಸರತಿಗಳು ನಿರ್ಗಮನ, 56 ಬಡಾವಣೆಗಳು ಒಳಗೊಂಡಂತೆ ಉಪನಗರದ 87 ಸ್ಥಳಗಳಿಗೆ ಒಟ್ಟು 143 ಸ್ಥಳಗಳಿಗೆ 21 ಕಿಮೀ ವ್ಯಾಪ್ತಿಯಲ್ಲಿ ಬಸ್ ಸೌಲಭ್ಯ, ಪ್ರತಿ ದಿನ ಸುಮಾರು 96 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸುತ್ತಾರೆ.

5 ಮಹಡಿ, ಎಸ್ಕಲೇಟರ್ ಮತ್ತು ಲಿಫ್ಸ್ ಸೌಲಭ್ಯ:

ನೂತನ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ತಳಮಹಡಿ ಮತ್ತು ಐದು(5) ಮಹಡಿ, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ಶಿಶುಗಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿ, ವಿಕಲಚೇತನರ ಪ್ರತ್ಯೇಕ ರಾಂಪ್ ವ್ಯವಸ್ಥೆ, ಪೊಲೀಸ್ ಚೌಕಿ, ವಿಭಾಗೀಯ ಕಚೇರಿ,  ಸಬ್-ವೇ ಸಂಪರ್ಕ, ಲಿಫ್ಟ್, ಎಸ್ಕಲೇಟರ್ ಸೌಲಭ್ಯ.

ಕಾರ್ಯಕ್ರಮದಲ್ಲಿ ‌ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು, ಮಾನ್ಯ ಲೋಕೋಪಯೋಗಿ ಸಚಿವರು, ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು, ಮಾನ್ಯ ಅಧ್ಯಕ್ಷರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!