ರಾಜ್ಯದಲ್ಲೇ ಬೆಳ್ತಂಗಡಿ ಮಾದರಿ ಕ್ಷೇತ್ರ; ಶಾಸಕ ಹರೀಶ್‌ ಪೂಂಜಾ ಅಭಿವೃದ್ಧಿಯ ಹರಿಕಾರ: ನಳಿನ್

Published : Dec 30, 2022, 07:35 AM IST
ರಾಜ್ಯದಲ್ಲೇ ಬೆಳ್ತಂಗಡಿ ಮಾದರಿ ಕ್ಷೇತ್ರ; ಶಾಸಕ ಹರೀಶ್‌ ಪೂಂಜಾ ಅಭಿವೃದ್ಧಿಯ ಹರಿಕಾರ: ನಳಿನ್

ಸಾರಾಂಶ

ಕಳೆದ ನಾಲ್ಕೂವರೆ ವರ್ಷಗಳಿಂದ ಸಾವಿರಾರು ರು. ಕೋಟಿ ಅನುದಾನ ತರಿಸಿ ಅಭಿವೃದ್ಧಿಯಲ್ಲಿ ಬೆಳ್ತಂಗಡಿ ಕ್ಷೇತ್ರವನ್ನು ಶಾಸಕ ಹರೀಶ್‌ ಪೂಂಜರು ಅಭಿವೃದ್ಧಿಯ ಹರಿಕಾರರಾಗಿ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ಭಾಜಪ ರಾಜ್ಯಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಬೆಳ್ತಂಗಡಿ (ಡಿ.30) : ಕಳೆದ ನಾಲ್ಕೂವರೆ ವರ್ಷಗಳಿಂದ ಸಾವಿರಾರು ರು. ಕೋಟಿ ಅನುದಾನ ತರಿಸಿ ಅಭಿವೃದ್ಧಿಯಲ್ಲಿ ಬೆಳ್ತಂಗಡಿ ಕ್ಷೇತ್ರವನ್ನು ಶಾಸಕ ಹರೀಶ್‌ ಪೂಂಜರು ಅಭಿವೃದ್ಧಿಯ ಹರಿಕಾರರಾಗಿ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ಭಾಜಪ ರಾಜ್ಯಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ವೇಣೂರು ಮುಖ್ಯಪೇಟೆ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಹೊಸ ಪಕ್ಷಗಳಿಂದ ಬಿಜೆಪಿಗೆ ನಷ್ಟಇಲ್ಲ: ನಳಿನ್‌ ಕುಮಾರ್‌

ಬ್ರಹ್ಮಕಲಶ ನೆರವೇರುವ ದೇವಸ್ಥಾನಗಳ ಕ್ಷೇತ್ರದ ಪರಿಸರದಲ್ಲಿ ಮೂಲ ಸೌಲಭ್ಯ ಒದಗಿಸಬೇಕೆನ್ನುವ ಆಶಯ ಇಲ್ಲಿಯ ಶಾಸಕದ್ದು. ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ಸಂದರ್ಭ ಯಾವುದೇ ಮೂಲಸೌಲಭ್ಯಗಳಿಗೆ ಧಕ್ಕೆಯಾಗಬಾರದೆನ್ನುವ ಶಾಸಕರ ಆಶಯದಂತೆ ಮುಖ್ಯಮಂತ್ರಿಯವರು ಹೆದ್ದಾರಿ ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ. ಬ್ರಹ್ಮಕಲಶಗಳಿಂದಲೇ ಶಾಸಕರಾಗಿರುವ ಪೂಂಜರು ದೇವಸ್ಥಾನಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದವರಾಗಿದ್ದಾರೆ ಎಂದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ವೇಣೂರು ಮುಖ್ಯಪೇಟೆ ಹೆದ್ದಾರಿಯ 1.4 ಕಿ.ಮೀ. ಮತ್ತು ಮುಂದುವರಿದ 2.5 ಕಿ.ಮೀ. ಹೆದ್ದಾರಿಯ ಅಭಿವೃದ್ಧಿಯನ್ನೂ ಮಾಡಲಾಗುತ್ತದೆ. ಸಂಸದರ ಕೈಯಲ್ಲೇ ಇದರ ಉದ್ಘಾಟನೆಯೂ ನೆರವೇರಲಿದೆ ಎಂದರು.

GDP ಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ನಳಿನ್‌ ಕುಮಾರ್‌ಕಟೀಲ್‌

ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ…, ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ ಪೂಜಾರಿ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ದನ ಪೂಜಾರಿ, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಎನ್‌. ಪುರುಷೋತ್ತಮ ರಾವ್‌, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್‌ ಕೋಟ್ಯಾನ್‌, ವೇಣೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಾಗೇಶ್‌ ಎಂ., ಹೆದ್ದಾರಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಗುರುಪ್ರಸಾದ್‌ ಎಂ., ಉಪಸಹಾಯಕ ಎಂಜಿನಿಯರ್‌ ಶಿವಕುಮಾರ್‌, ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಅಧ್ಯಕ್ಷ ಅರುಣ್‌ ಕ್ರಾಸ್ತ, ವಿವಿಧ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು. ವೇಣೂರು ಪ್ರಾ.ಕೃ.ಪ.ಸ. ಸಂಘ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಸ್ವಾಗತಿಸಿ, ವಂದಿಸಿದರು.

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು