ಕರ್ನಾಟಕ ಪೊಲೀಸ್ ಇಲಾಖೆಗೇ ಕಪ್ಪುಚುಕ್ಕೆ: ಅಪ್ರಾಪ್ತರ ಮೇಲೆ ವಿಕೃತಿ ಮೆರೆದ ಅಮೃತಹಳ್ಳಿ ಪಿಎಸ್‌ಐ ಪ್ರವೀಣ್ ಬಂಧನ!

Published : Jun 29, 2026, 10:51 PM IST
Bengaluru PSI praveen

ಸಾರಾಂಶ

ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪಿಎಸ್‌ಐ ಪ್ರವೀಣ್, ಕೊಲೆ ಪ್ರಕರಣದ ವಿಚಾರಣೆ ವೇಳೆ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ವಿಕೃತ ಕೃತ್ಯವನ್ನು ವಿಡಿಯೋ ಮಾಡಿ, ಅದು ವೈರಲ್ ಆದ ನಂತರ ಪೋಕ್ಸೋ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ.

ಬೆಂಗಳೂರು (ಜೂ.29): ರಕ್ಷಕನೇ ಭಕ್ಷಕನಾದ ಎಂಬ ಮಾತಿನಂತೆ, ಕರ್ತವ್ಯದ ಹೆಸರಿನಲ್ಲಿ ಅಪ್ರಾಪ್ತ ಬಾಲಕರ ಮೇಲೆ ಅತ್ಯಂತ ವಿಕೃತವಾಗಿ ದೌರ್ಜನ್ಯ ಎಸಗಿದ ಅಮೃತಹಳ್ಳಿ ಠಾಣೆಯ ಪಿಎಸ್‌ಐ (PSI) ಪ್ರವೀಣ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇಲಾಖೆಯ ಘನತೆಗೆ ಧಕ್ಕೆ ತರುವಂತಹ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಡೀ ನಗರವನ್ನು ಬೆಚ್ಚಿಬೀಳಿಸಿದೆ.

ಏನಿದು ಪ್ರಕರಣ?

ಕೆಲ ತಿಂಗಳ ಹಿಂದೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಲವು ಅಪ್ರಾಪ್ತ ಬಾಲಕರನ್ನು ವಿಚಾರಣೆಗಾಗಿ ಕರೆತರಲಾಗಿತ್ತು. ಆದರೆ, ಪಿಎಸ್‌ಐ ಪ್ರವೀಣ್ ಈ ಬಾಲಕರನ್ನು ಠಾಣೆಯಲ್ಲಿ ಇರಿಸುವ ಬದಲು ಖಾಸಗಿ ಸ್ಥಳವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಬಾಲಕರ ಮೇಲೆ ಬೆಲ್ಟ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಲ್ಲದೆ, ಅತೀವ ವಿಕೃತಿ ಮೆರೆದಿದ್ದಾರೆ.

ವಿಕೃತಿಯ ವಿಡಿಯೋ ವೈರಲ್:

ವಿಚಾರಣೆಯ ನೆಪದಲ್ಲಿ ಓರ್ವ ಅಪ್ರಾಪ್ತ ಆರೋಪಿಯಿಂದ ಇನ್ನೊಬ್ಬ ಆರೋಪಿಯ ಬಾಯಿಗೆ ಮ*ರ್ಮಾಂಗ ಇರಿಸುವಂತೆ ಒತ್ತಾಯಿಸಿ, ಅಸಭ್ಯವಾಗಿ ವರ್ತಿಸಿದ್ದಾರೆ. ಈ ಇಡೀ ವಿಕೃತ ಘಟನೆಯನ್ನು ಪಿಎಸ್‌ಐ ಪ್ರವೀಣ್ ಸ್ವತಃ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಇತ್ತೀಚೆಗೆ ಈ ವಿಡಿಯೋ ವೈರಲ್ ಆಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಸತ್ಯಾಂಶ ಹೊರಬಿದ್ದಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು, ಪ್ರವೀಣ್ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಹಾಗೂ ಅಸಭ್ಯ ವರ್ತನೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿ ಪಿಎಸ್‌ಐ ಪ್ರವೀಣ್‌ನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

PREV
Read more Articles on
click me!

Recommended Stories

Chikkamagaluru: ದತ್ತಪೀಠದ ತಪ್ಪಲು ಮಾಣಿಕ್ಯಧಾರಾ ರಸ್ತೆಯಲ್ಲೂ ಅಕ್ರಮ ಗೋರಿ, ಹಸಿರು ಚಾದರ ಪತ್ತೆ! ಹಿಂದೂಗಳ ಆಕ್ರೋಶ
ರಸ್ತೆ ಅಪಘಾತ ಅತೀ ಹೆಚ್ಚು ಸಂಭವಿಸುತ್ತಿರುವುದರಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ!