ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ

ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ

Published : May 13, 2026, 09:12 PM IST
ಬೆಂಗಳೂರಿನಲ್ಲಿ ಪ್ರೇಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಘೋರ ಘಟನೆಗಳು ನಡೆದಿವೆ. ತಮ್ಮ ಪ್ರೇಯಸಿಯೊಂದಿಗೆ ಓಡಿಹೋದ ತಪ್ಪಿಗೆ ಅರ್ಚಕ ಅಣ್ಣನನ್ನು ಅಪಹರಿಸಿ ಚಿತ್ರಹಿಂಸೆ ನೀಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ, ಸ್ನೇಹಿತನ ಪ್ರೀತಿಗೆ ಸಹಾಯ ಮಾಡಲು ಹೋದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.

ಬೆಂಗಳೂರು: ಪ್ರೀತಿ ಎಂಬುದು ಪ್ರಾಣ ಉಳಿಸಬೇಕು, ಆದರೆ ಇತ್ತೀಚಿನ ದಿನಗಳಲ್ಲಿ ಅದೇ ಪ್ರೀತಿ ಸಂಬಂಧಗಳ ನಡುವೆ ವಿಷ ಬಿತ್ತುತ್ತಿದೆ. ತಮ್ಮನೊಬ್ಬ ಪ್ರೇಯಸಿಯೊಂದಿಗೆ ಊರು ಬಿಟ್ಟು ಓಡಿ ಹೋದರೆ, ಆತ ಮಾಡಿದ ತಪ್ಪಿಗೆ ಅಮಾಯಕ ಅಣ್ಣನನ್ನೇ ಕಿಡ್ನ್ಯಾಪ್ ಮಾಡಿ ಮೃಗೀಯವಾಗಿ ಚಿತ್ರಹಿಂಸೆ ನೀಡಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ದೇವಸ್ಥಾನದಿಂದ ಮನೆಗೆ ಹೋಗುವಾಗ ಅಟ್ಯಾಕ್ 

ಸಂತ್ರಸ್ತ ಕೊಟ್ರೇಶಿ ವೃತ್ತಿಯಲ್ಲಿ ದೇವಸ್ಥಾನದ ಅರ್ಚಕರು. ದೇವಸ್ಥಾನ, ಪೂಜೆ ಪುನಸ್ಕಾರ ಅಂತಲೇ ಬದುಕುತ್ತಿದ್ದವರು. ಆದರೆ, ವಿಧಿಯಾಟವೇ ಬೇರೆಯಾಗಿತ್ತು. ಒಂದು ದಿನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಹಠಾತ್ತನೆ ಬಂದ ಗ್ಯಾಂಗ್ ಒಂದು ಇವರನ್ನು ಅಪಹರಿಸಿದೆ. ಅಲ್ಲಿಂದ ಶುರುವಾಗಿದ್ದೇ ನರಕಯಾತನೆ.

ತಮ್ಮನ ಪ್ರೇಮಕ್ಕೆ ಅಣ್ಣ ಬಲಿಪಶು! 

ಕೊಟ್ರೇಶಿ ಅವರ ತಮ್ಮ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಇಬ್ಬರೂ ಮನೆಯವರ ವಿರೋಧದ ನಡುವೆಯೂ ವಾರದ ಹಿಂದೆಯೇ ಊರು ಬಿಟ್ಟು ಎಸ್ಕೇಪ್ ಆಗಿದ್ದರು. ಈ ವಿಷಯದಿಂದ ಕೆರಳಿದ ಯುವತಿಯ ಪೋಷಕರು ಮತ್ತು ಸಂಬಂಧಿಕರು, ತಮ್ಮನ ಇರುವಿಕೆಯನ್ನು ಪತ್ತೆಹಚ್ಚಲು ಅಣ್ಣ ಕೊಟ್ರೇಶಿಯನ್ನು ಗುರಿಯಾಗಿಸಿಕೊಂಡರು. ‘ನಿಮ್ಮ ತಮ್ಮನನ್ನು ಕರೆಸು, ಇಲ್ಲದಿದ್ದರೆ ನಿನ್ನ ಪ್ರಾಣ ತೆಗೆಯುತ್ತೇವೆ’ ಎಂದು ಬೆದರಿಸಿ ಕೈಕಾಲು ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ.

ವಿಡಿಯೋ ಮಾಡಿ ಕುಟುಂಬಕ್ಕೆ ಕಳುಹಿಸಿದ ಕಿಡ್ನ್ಯಾಪರ್ಸ್ 

ಕಿಡ್ನ್ಯಾಪ್ ಮಾಡಿದ ಆರೋಪಿಗಳು ಕ್ರೌರ್ಯದ ಪರಮಾವಧಿ ಮೆರೆದಿದ್ದಾರೆ. ಅರ್ಚಕ ಕೊಟ್ರೇಶಿಗೆ ಹೊಡೆಯುತ್ತಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ಅದನ್ನು ಅವರ ಕುಟುಂಬ ಸದಸ್ಯರಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ವಿಡಿಯೋ ಕಂಡು ಬೆಚ್ಚಿಬಿದ್ದ ಕುಟುಂಬಸ್ಥರು ತಕ್ಷಣ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಕಾರ್ಯಪ್ರವೃತ್ತರಾಗುತ್ತಿದ್ದಂತೆ ವಿಷಯ ತಿಳಿದ ಕಿಡ್ನ್ಯಾಪರ್ಸ್ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕುಟುಂಬದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತನ ಪ್ರೀತಿಗಾಗಿ ಪ್ರಾಣಬಿಟ್ಟ ಅಮಾಯಕ ಅಭಿಷೇಕ 

ಇನ್ನೊಂದು ಮನಕಲಕುವ ಘಟನೆಯಲ್ಲಿ, ಸ್ನೇಹಿತನ ಪ್ರೇಮ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಅಮಾಯಕ ಯುವಕ ಅಭಿಷೇಕ ಎಂಬಾತ ಬಲಿಯಾಗಿದ್ದಾನೆ. ಸಿಸಿ ಕ್ಯಾಮರಾ ಅಳವಡಿಸುವ ಕೆಲಸ ಮಾಡುತ್ತಿದ್ದ ಅಭಿಷೇಕ, ಗೆಳೆಯನ ಪ್ರೀತಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದನು. ಆವತ್ತೊಂದು ದಿನ ಕೆಲಸಕ್ಕೆ ಹೋದವನು ಮರಳಿ ಬರಲೇ ಇಲ್ಲ.

ಕೊನೆಗೆ ರೈಲ್ವೆ ಹಳಿಗಳ ಮೇಲೆ ಆತನ ಮೃತದೇಹ ಪತ್ತೆಯಾಗಿದೆ. ಸಾವಿಗೂ ಮುನ್ನ ಆತ ಮಾಡಿದ ಆಡಿಯೋ ರೆಕಾರ್ಡಿಂಗ್ ಈಗ ಪೊಲೀಸರ ಕೈ ಸೇರಿದ್ದು, ಅದರಲ್ಲಿ ತನಗೆ ನೀಡಲಾದ ಟಾರ್ಚರ್ ಬಗ್ಗೆ ವಿವರಿಸಿದ್ದಾನೆ ಎನ್ನಲಾಗಿದೆ. ಪ್ರೀತಿ ಎನ್ನುವ ಹೆಸರಿನಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಸಮಾಜಕ್ಕೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more