
ಬೆಂಗಳೂರು (ಮೇ 03): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.32.72 ಕೋಟಿ ಅಂದಾಜು ಮೌಲ್ಯದ ಒಟ್ಟು 10 ಎಕರೆ 0.37 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸ್ಮಶಾನ, ಕರೆ, ಚೌಳಕುಂಟೆ, ಗುಂಡುತೋಪು, ಕುಂಟೆ, ಸರ್ಕಾರಿ ಸ್ಮಶಾನ, ಸರ್ಕಾರಿ ಕೊರಕಲು ಮತ್ತು ಖರಾಬು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಟ್ಟೊಗೊಲ್ಲಹಳ್ಳಿ ಗ್ರಾಮದ ಸ.ನಂ 48ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.31 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.15 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಕೈಕೊಂಡ್ರಹಳ್ಳಿ ಗ್ರಾಮದ ಸ.ನಂ: 7ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.10 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಕಸಬಾ-1 ಹೋಬಳಿಯ ಸಿಡಿಹೊಸಕೋಟೆ ಗ್ರಾಮದ ಸ.ನಂ. 38ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ. ಕಸಬಾ-2 ಹೋಬಳಿಯ ಬೆಸ್ತಮಾನಹಳ್ಳಿ ಗ್ರಾಮದ ಸ.ನಂ. 9ರ ಚೌಳಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ 0.06 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.09 ಕೋಟಿಗಳಾಗಿರುತ್ತದೆ. ಜಿಗಣಿ-1 ಹೋಬಳಿಯ ಬುಕ್ಕಸಾಗರ ಗ್ರಾಮದ ಸ.ನಂ 11 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ 0.02 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 0.04 ಕೋಟಿಗಳಾಗಿರುತ್ತದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದ ಸ.ನಂ 216ರ ಸರ್ಕಾರಿ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ 0.02ಗುಂಟೆಗಳಾಗಿದ್ದು ಅಂದಾಜು ಮೌಲ್ಯ 0.10 ಕೋಟಿಗಳಾಗಿರುತ್ತದೆ.
ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ 29ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ 1ಎಕರೆ 0.32 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 3.75 ಕೋಟಿಗಳಾಗಿರುತ್ತದೆ.
ಬೇಗೂರು ಹೋಬಳಿಯ ಮೈಲಸಂದ್ರ ಗ್ರಾಮದ ಸ.ನಂ 12ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 1.00 ಕೋಟಿಗಳಾಗಿರುತ್ತದೆ.
ಕೆಂಗೇರಿ ಹೋಬಳಿಯ ಸೋಂಪುರ ಗ್ರಾಮದ ಸ.ನಂ 12ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ 0.22 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 2.00 ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಗ್ರಾಮದ ಸಂ.ನಂ 76ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ 2 ಎಕರೆಗಳಾಗಿದ್ದು ಅಂದಾಜು ಮೌಲ್ಯ 14.00ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ನೆಲ್ಲಕುಂಟೆ ಗ್ರಾಮದ ಸಂ.ನಂ 45ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ 0.10ಗುಂಟೆಗಳಾಗಿದ್ದು ಅಂದಾಜು ಮೌಲ್ಯ 2.00ಕೋಟಿಗಳಾಗಿರುತ್ತದೆ. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.