Bengaluru Court verdict: ರೌಡಿಶೀಟರ್‌ಗಳಾದ ಕಪ್ಪೆ, ಕರಿಶ್ಮಾ, ಕಣ್ಣುರಿ ಮೂವರಿಗೂ ಜೀವಾವಧಿ ಶಿಕ್ಷೆ ಪ್ರಕಟ!

Published : Jul 02, 2026, 09:07 PM IST
Bengaluru Court verdict

ಸಾರಾಂಶ

2016ರಲ್ಲಿ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿದ್ದ ನಾಗರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಕುಖ್ಯಾತ ರೌಡಿಶೀಟರ್‌ಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು ಎಂಟು ವರ್ಷಗಳ ಸುದೀರ್ಘ ವಿಚಾರಣೆಯ ನಂತರ, ಬಲವಾದ ಸಾಕ್ಷ್ಯಾಧಾರಗಳನ್ನು ಆಧರಿಸಿ ತೀರ್ಪು ನೀಡಲಾಗಿದೆ.

ಬೆಂಗಳೂರು (ಜು.02): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ನಾಗರಾಜ್ ಎಂಬುವವರ ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಮೂವರು ರೌಡಿಶೀಟರ್‌ಗಳಿಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

2016ರಲ್ಲಿ ಬೆಂಗಳೂರಿನ ಕೆಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಾಗರಾಜ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ, ನಗರದ ಕುಖ್ಯಾತ ರೌಡಿಶೀಟರ್‌ಗಳಾದ ವೆಂಕಟೇಶ್ @ ಕಪ್ಪೆ, ನಾಗರಾಜ್ @ ಕರಿಶ್ಮಾ ಮತ್ತು ಪುನೀತ್ @ ಕಣ್ಣುರಿ ಎಂಬುವವರನ್ನು ಬಂಧಿಸಿದ್ದರು. ಅಂದಿನ ಇನ್ಸ್ಪೆಕ್ಟರ್ ಉಮೇಶ್ ಮತ್ತು ಅವರ ತಂಡ ಈ ಪ್ರಕರಣದ ಸುದೀರ್ಘ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಬಲವಾದ ಸಾಕ್ಷ್ಯಾಧಾರಗಳೊಂದಿಗೆ ಚಾರ್ಜ್ ಶೀಟ್ ಸಲ್ಲಿಸಿತ್ತು.

ಕೋರ್ಟ್ ನೀಡಿದ ಕಠಿಣ ಶಿಕ್ಷೆ:

ಸುಮಾರು ಹತ್ತು ವರ್ಷಗಳ ಕಾಲ ನಡೆದ ಸುದೀರ್ಘ ವಿಚಾರಣೆಯ ಬಳಿಕ, ನ್ಯಾಯಾಲಯವು ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿದೆ. ಸರ್ಕಾರದ ಪರವಾಗಿ ವಕೀಲ ಕೆ. ಶರಣಬಸ್ಸಪ್ಪ ಅವರು ವಾದ ಮಂಡಿಸಿದ್ದರು. ಸಾಕ್ಷಿಗಳ ಹೇಳಿಕೆಗಳು, ಮರಣೋತ್ತರ ಪರೀಕ್ಷೆಯ ವೈದ್ಯಕೀಯ ವರದಿ ಮತ್ತು ಪೊಲೀಸರು ಸಂಗ್ರಹಿಸಿದ್ದ ತಾಂತ್ರಿಕ ಸಾಕ್ಷ್ಯಗಳನ್ನು (Technical Evidence) ಪುರಸ್ಕರಿಸಿದ ನ್ಯಾಯಾಧೀಶರು, ಮೂವರು ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.

PREV
Read more Articles on
click me!

Recommended Stories

ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಯುರೋಪ್ ಪ್ರವಾಸಿಗರು ಯಾಕೆ ಬಂದರು? ಇಲ್ಲಿದೆ ಕಾರಣ!
ಬಿಡದಿ ಟೌನ್‌ಶಿಪ್ ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನ ಕೊಡಿ: ಡಿಕೆಶಿಗೆ ಜನಾರ್ದನ ರೆಡ್ಡಿ ಟಾಂಗ್