
ಬೆಂಗಳೂರು: ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮ*ಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಸಮಯೋಚಿತವಾಗಿ ರಕ್ಷಿಸಿದ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಮೂರ್ತಿಯವರ ತ್ವರಿತ ಕ್ರಮದಿಂದ ಒಂದು ಜೀವ ಉಳಿದಿದ್ದು, ಸ್ಥಳೀಯರು ಪೊಲೀಸರ ಕಾರ್ಯವನ್ನು ಮೆಚ್ಚಿದ್ದಾರೆ.
ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬನು ಆತ್ಮ*ಹತ್ಯೆ ಮಾಡಲು ರೈಲ್ವೆ ಹಳಿಯ ಮೇಲೆ ಮಲಗಿ ಇದ್ದನು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ದಾಖಲಿಸಿ, ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸಂದೇಶ ಸ್ವೀಕರಿಸಿದ ಯಲಹಂಕ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಯಾವುದೇ ವಿಳಂಬವಿಲ್ಲದೆ ವ್ಯಕ್ತಿಯನ್ನು ಸುರಕ್ಷಿತವಾಗಿ ಹಳಿಯಿಂದ ಎತ್ತಿ ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಮೂರ್ತಿಯವರ ಪಾತ್ರ ಪ್ರಮುಖವಾಗಿತ್ತು.
ರಕ್ಷಣೆ ಬಳಿಕ ಪೊಲೀಸರು ಆ ವ್ಯಕ್ತಿಗೆ ಬುದ್ಧಿವಾದ ಹೇಳಿ, ಜೀವನದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಸಮಾಲೋಚನೆ (ಕೌನ್ಸೆಲಿಂಗ್) ಪಡೆಯುವಂತೆ ಸೂಚನೆ ನೀಡಿದ್ದಾರೆ. ಈ ಘಟನೆ ಸಾರ್ವಜನಿಕರ ಜಾಗೃತಿ ಮತ್ತು ಪೊಲೀಸರ ತ್ವರಿತ ಸ್ಪಂದನೆಯಿಂದ ಒಂದು ಅಮೂಲ್ಯ ಜೀವ ಉಳಿಯಬಹುದು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ.