ಬೆಂಗಳೂರು ಮಂಗಳೂರು ರೈಲು ಸಂಚಾರದಲ್ಲಿ ಭಾರೀ ಬದಲಾವಣೆಯಾಗಿದೆ. ಅದೇನದು..?
ಬೆಂಗಳೂರು (ಅ.06): ಬೆಂಗಳೂರು ಹಾಗೂ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೊರೊನಾ ಸಂದರ್ಭದಲ್ಲಿ ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಅಕ್ಟೋಬರ್ 7 ರಿಂದ ಸಂಚಾರ ಸ್ಥಗಿತವಾಗಲಿದೆ.
ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ನಡೆಸುತಿತ್ತು.
ಯಲಚೇನಹಳ್ಳಿ- ಅಂಜನಾಪುರ ಮೆಟ್ರೋ ರೈಲು ಸೇವೆಗೆ ಸಿದ್ಧತೆ .
ವಿಶೇಷ ರೈಲಿನ ಜೊತೆಗೆ ವಾರದಲ್ಲಿ ಮೂರು ಬಾರಿ ಸಂಚಾರ ಮಾಡುತ್ತಿದ್ದ ಕೆಎಸ್ಆರ್ ರೈಲು ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಿದೆ.
ವಾರದಲ್ಲಿ ಬುಧವಾರ ಶುಕ್ರವಾರ, ಭಾನುವಾರ ಸಂಚಾರ ನಡೆಸಲಿದೆ. ಅಕ್ಟೋಬರ್ 7 ರಿಂದ ಬದಲಾವಣೆಯಾಗಲಿದೆ.
ಕೊರೋನಾ ಸಂದರ್ಭದಲ್ಲಿ ರಾಜ್ಯದಲ್ಲಿ ರೈಲು, ರಸ್ತೆ ಸಾರಿಗೆಯಲ್ಲಿ ಭಾರೀ ಬದಲಾವಣೆಯಾಗಿತ್ತು. ಹಲವು ಸೇವೆಗಳು ಬದಲಾಗಿದ್ದವು. ಇದೀಗ ನಿಧಾನಕ್ಕೆ ಸಾರಿಗೆ ವ್ಯವಸ್ಥೆ ಚೇತರಿಸಿಕೊಳ್ಳುತ್ತಿದೆ.