ಬೆಂಗಳೂರು-ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

Kannadaprabha News   | Asianet News
Published : Oct 06, 2020, 12:49 PM IST
ಬೆಂಗಳೂರು-ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

ಸಾರಾಂಶ

ಬೆಂಗಳೂರು ಮಂಗಳೂರು ರೈಲು ಸಂಚಾರದಲ್ಲಿ ಭಾರೀ ಬದಲಾವಣೆಯಾಗಿದೆ. ಅದೇನದು..?

ಬೆಂಗಳೂರು (ಅ.06): ಬೆಂಗಳೂರು ಹಾಗೂ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 

ಕೊರೊನಾ ಸಂದರ್ಭದಲ್ಲಿ ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಅಕ್ಟೋಬರ್ 7 ರಿಂದ ಸಂಚಾರ ಸ್ಥಗಿತವಾಗಲಿದೆ. 

ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ನಡೆಸುತಿತ್ತು. 

ಯಲಚೇನಹಳ್ಳಿ- ಅಂಜನಾಪುರ ಮೆಟ್ರೋ ರೈಲು ಸೇವೆಗೆ ಸಿದ್ಧತೆ .

ವಿಶೇಷ ರೈಲಿನ ಜೊತೆಗೆ ವಾರದಲ್ಲಿ ಮೂರು ಬಾರಿ ಸಂಚಾರ ಮಾಡುತ್ತಿದ್ದ ಕೆಎಸ್‌ಆರ್ ರೈಲು ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಿದೆ. 

ವಾರದಲ್ಲಿ ಬುಧವಾರ ಶುಕ್ರವಾರ, ಭಾನುವಾರ ಸಂಚಾರ ನಡೆಸಲಿದೆ. ಅಕ್ಟೋಬರ್ 7 ರಿಂದ ಬದಲಾವಣೆಯಾಗಲಿದೆ.

ಕೊರೋನಾ ಸಂದರ್ಭದಲ್ಲಿ ರಾಜ್ಯದಲ್ಲಿ ರೈಲು, ರಸ್ತೆ ಸಾರಿಗೆಯಲ್ಲಿ ಭಾರೀ ಬದಲಾವಣೆಯಾಗಿತ್ತು. ಹಲವು ಸೇವೆಗಳು ಬದಲಾಗಿದ್ದವು.  ಇದೀಗ ನಿಧಾನಕ್ಕೆ ಸಾರಿಗೆ ವ್ಯವಸ್ಥೆ ಚೇತರಿಸಿಕೊಳ್ಳುತ್ತಿದೆ. 

PREV
click me!

Recommended Stories

ಹಿಜಾಬ್ ಸಮಾನತೆ ಸಂಕೇತ, ಕೇಸರಿ ಶಾಲು ಹಾಕಿ ಶಾಲೆಗೆ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಕೆ!
LPG Gas Crisis: ರಾಜ್ಯದಲ್ಲಿ ಮತ್ತೆ ಗ್ಯಾಸ್ ಟ್ರಬಲ್: ಏಜೆನ್ಸಿಗಳಿಂದಲೇ ಕಾಳಸಂತೇಲಿ ಮಾರಾಟ, ರಾಯಚೂರು, ಯಾದಗಿರಿ, ಹಾಸನ ಜನರು ಹೈರಾಣು