
ಬೆಂಗಳೂರು (ಜೂ.20): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್ಸಿಎಲ್), ನೇರಳೆ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಜೂ.22, 2025ರಂದು ಭಾನುವಾರ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ನೇರಳೆ ಮಾರ್ಗದ ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನಂಮಾ ಮೆಟ್ರೋನ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ತಾತ್ಕಾಲಿಕ ಸೇವಾ ವ್ಯತ್ಯಯಕ್ಕೆ ಬಿಎಂಆರ್ಸಿಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ಶುಕ್ರವಾರ ಅಧಿಕೃತ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ಜೂನ್ 22 ಭಾನುವಾರ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ, ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮಾರ್ಗದ ನಡುವಿನ ಹಾಲಸೂರು ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣಗಳ ಮಧ್ಯೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.
ಇತರೆ ಮಾರ್ಗಗಳಲ್ಲಿ ಮೆಟ್ರೋ ಸೇವೆ:
ಈ ತಾತ್ಕಾಲಿಕ ವ್ಯತ್ಯಯವು ಕೇವಲ ನಿರ್ದಿಷ್ಟ ವಿಭಾಗದ ಮೆಟ್ರೋ ಸಂಚಾರಕ್ಕೆ ಸಂಬಂಧಪಟ್ಟದ್ದಾಗಿದ್ದು, ನೇರಳೆ ಮಾರ್ಗದ ಇತರೆ ಮಾರ್ಗಗಳಲ್ಲಿ ಹಾಗೂ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಬಿಎಂಆರ್ಸಿಎಲ್ ಕಡೆಯಿಂದ ವಿನಂತಿ:
ಬಿಎಮ್ಆರ್ಸಿಎಲ್ ತನ್ನ ಪ್ರಕಟಣೆಯಲ್ಲಿ ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸಿದ್ದು, ಪ್ರಯಾಣಿಕರು ತಮ್ಮ ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳಬೇಕು ಎಂದು ವಿನಂತಿಸಿದೆ. ಸಾರ್ವಜನಿಕರ ತಿಳುವಳಿಕೆ ಹಾಗೂ ಸಹಕಾರಕ್ಕೆ ಸಂಸ್ಥೆ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ. ಮೆಟ್ರೋ ಸೇವೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಬಿಎಂಆರ್ಸಿಎಲ್ ವೆಬ್ಸೈಟ್ ಅಥವಾ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು.
ಸೂಚನೆ: ಈ ತಾತ್ಕಾಲಿಕ ವ್ಯತ್ಯಯವು ಕೇವಲ 2 ಗಂಟೆಗಳಿಗಷ್ಟೇ ಇರುತ್ತದೆ. ಸಹನೆ ಹಾಗೂ ಸಹಕಾರದಿಂದ ಮೆಟ್ರೋ ಪ್ರಯಾಣಿಕರು ನಿರ್ವಹಣೆ ಕಾರ್ಯದ ಯಶಸ್ಸಿಗೆ ನೆರವಾಗುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.