ಶಿವಮೊಗ್ಗ-ಬೆಂಗಳೂರು ರೈಲು ಸಂಚಾರ ಸಮಯ ಬದಲು : ಗಮನಿಸಿ

Kannadaprabha News   | Asianet News
Published : Feb 01, 2021, 12:29 PM IST
ಶಿವಮೊಗ್ಗ-ಬೆಂಗಳೂರು ರೈಲು ಸಂಚಾರ ಸಮಯ ಬದಲು : ಗಮನಿಸಿ

ಸಾರಾಂಶ

ಶಿವಮೊಗ್ಗದಿಂದ  ಸಂಚಾರ ಮಾಡುವ ರೈಲಿನ ಸಮಯ ಬದಲಾಗಿದೆ. ಯಶವಂತಪುರದಿಂದ - ಶಿವಮೊಗ್ಗ ನಡುವೆ ಸಂಚಾರ ಮಾಡುತ್ತಿದ್ದ ಜನಶತಾಬ್ದಿ ರೈಲು ಸಮಯ ಹಾಗೂ ಹೊರಡುವ ಸ್ಥಳವೂ ಬದಲಾಗಿದೆ.

ಶಿವಮೊಗ್ಗ (ಫೆ.01):  ಶಿವಮೊಗ್ಗದಿಂದ - ಬೆಂಗಳೂರಿನ ಯಶವಂತಪುರಕ್ಕೆ ಸಂಚಾರ ಮಾಡುತ್ತಿದ್ದ ಜನಶತಾಬ್ದಿ ರೈಲು ವೇಳಾಪಟ್ಟಿ ಬದಲಾಗಿದೆ. ಬದಲಾದ ವೇಳಾಪಟ್ಟಿಗೆ ಅನುಗುಣವಾಗಿ ಪ್ರಯಾಣ ಆರಂಭವಾಗಿದೆ. 

ಶಿವಮೊಗ್ಗದಿಂದ ಬೆಳಗ್ಗೆ 5.30ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ರೈಲು ಜ.31ರಿಂದ ಬೆಳಗ್ಗೆ 5.15ಕ್ಕೆ ಹೊರಡುತ್ತಿದೆ.

ಇಷ್ಟು ದಿನ ಶಿವಮೊಗ್ಗದಿಂದ ಯಶವಂತಪುರದವರೆಗೆ ಮಾತ್ರ ಚಲಿಸುತ್ತಿದ್ದ ರೈಲು ಇನ್ನುಮುಂದೆ ಮೆಜೆಸ್ಟಿಕ್‌ ತಲುಪುತ್ತದೆ.

ಶಿವಮೊಗ್ಗ-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ...

ಇನ್ನು ಮುಂದೆ ಯಶವಂತಪುರ ಬದಲಿಗೆ ಮೆಜೆಸ್ಟಿಕ್‌ನಿಂದ ಸಂಜೆ 5.15ಕ್ಕೆ ಹೊರಡುತ್ತದೆ.   ಪ್ರಯಾಣಿಕರು ಬದಲಾಗಿರುವ ಸಮಯವನ್ನು ಗಮನಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.

PREV
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!