ನೀರಿನ ಬಿಕ್ಕಟ್ಟು: ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕನ್ನಡದಲ್ಲೇ ಹೇಳಿದ ನಟ ಚಿರಂಜೀವಿ

Published : Mar 27, 2024, 02:06 PM ISTUpdated : Mar 27, 2024, 02:38 PM IST
ನೀರಿನ ಬಿಕ್ಕಟ್ಟು: ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕನ್ನಡದಲ್ಲೇ ಹೇಳಿದ ನಟ ಚಿರಂಜೀವಿ

ಸಾರಾಂಶ

ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದಾರೆ. ನೀರಿನ ಸಂರಕ್ಷಣೆಗೆ ಬೇಕಾದ ಕ್ರಮದ ಬಗ್ಗೆ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಬರೆದುಕೊಂಡಿದ್ದಾರೆ.

ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದಾರೆ. ನೀರಿನ ಸಂರಕ್ಷಣೆಗೆ ಬೇಕಾದ ಕ್ರಮದ ಬಗ್ಗೆ ಬರೆದುಕೊಂಡಿದ್ದಾರೆ. ಕನ್ನಡದಲ್ಲೇ ಈ ಬಗ್ಗೆ ಟ್ವೀಟ್‌ ಮಾಡಿರುವ ನಟ ಚಿರಂಜೀವಿ ಅವರ ಈ ಟ್ವೀಟ್‌ ಸಿಲಿಕಾನ್ ಸಿಟಿಯಲ್ಲಿ ನೀರಿನ ಕೊರತೆಯ ತುರ್ತು ಸಮಸ್ಯೆಯನ್ನು ಬಗೆಹರಿಸಲು ಕ್ಷಿಪ್ರ ಪರಿಹಾರಗಳ ನಿರ್ಣಾಯಕ ಅಗತ್ಯವನ್ನು ಒತ್ತಿಹೇಳುತ್ತಿದೆ.

ಒಂದು ಕಾಲದಲ್ಲಿ ತನ್ನ ಹಚ್ಚ ಹಸಿರಿಗೆ ಹೆಸರುವಾಸಿಯಾಗಿದ್ದ ಉದ್ಯಾನ ನಗರಿ ಬೆಂಗಳೂರು ಈಗ ಭೀಕರ ನೀರಿನ ಕೊರತೆಯನ್ನು ಎದುರಿಸುತ್ತಿದೆ, ಒಂದೊಂದು  ಹನಿ ನೀರು ಕೂಡ  ಅಮೂಲ್ಯ ವಸ್ತುವಾಗುತ್ತಿವೆ. ಸ್ಥಳೀಯವಾಗಿ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಗಮನ ಸೆಳೆದಿರುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದಂತೆ ನಗರ ನಿವಾಸಿಗಳು ಹತಾಶರಾಗಿದ್ದಾರೆ. ಬಿಬಿಎಂಪಿ, ಜಲಮಂಡಳಿ ಕೂಡ ನೀರಿನ ಮಿತವಾದ ಬಳಕೆ ಬಗ್ಗೆ ಯೋಜನೆಗಳನ್ನು ಕೈಕೊಂಡಿದೆ. ನೀರು ಪೋಲಾಗದಂತೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೂಡ ತೆಗೆದುಕೊಂಡಿದೆ.

ಬೆಂಗಳೂರಿನ ಫಾರ್ಮ್ ಹೌಸ್‌ ಹೊಂದಿರುವ ನಟ ಚಿರಂಜೀವಿ ಅವರು ಯಾವ ರೀತಿ ನೀರನ್ನು ಸಂರಕ್ಷಿಸಲು ಕ್ರಮ ಕೈಗೊಂಡಿದ್ದಾರೆ ಎಂಬುದರ ಬಗ್ಗೆ ವಿವರಿಸಿದ್ದಾರೆ. ಚಿರಂಜೀವಿ ತಮ್ಮ ಟ್ವೀಟ್‌ನಲ್ಲಿ ಪರಿಸ್ಥಿತಿಯ ತೀವ್ರತೆಯನ್ನು ಎತ್ತಿ ತೋರಿಸಿದ್ದಾರೆ ಮತ್ತು ಭವಿಷ್ಯದ ನೀರಿನ ಬಿಕ್ಕಟ್ಟನ್ನು ತಡೆಗಟ್ಟಲು ಸುಸ್ಥಿರ ಪರಿಹಾರಗಳನ್ನು ಕಂಡುಹಿಡಿಯುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ್ದಾರೆ.  ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ನೀವು ಎಲ್ಲಿ ನೋಡಿದರೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕುಡಿಯುವ ನೀರಿನ ಪ್ರವೇಶವು ಹೆಚ್ಚು ಸವಾಲಾಗುತ್ತಿದೆ, ಜನರು ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ" ಎಂದು ಚಿರಂಜೀವಿ ತಮ್ಮ ಟ್ವೀಟ್‌ನಲ್ಲಿ ವ್ಯಕ್ತಪಡಿಸಿದ್ದಾರೆ.

ಜೊತೆಗೆ ತಮ್ಮ ಫಾರ್ಮ್ ಹೌಸ್‌ನಲ್ಲಿ 20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು (ಇಂದು ಗುಂಡಿ ರೀತಿಯಲ್ಲಿ) ಸೈಟ್‌ನಾದ್ಯಂತ ಆಯಕಟ್ಟಿನ ಬಿಂದುಗಳಲ್ಲಿ ಸ್ಥಾಪಿಸಲಾಗಿದೆ.  ಪ್ರತಿಯೊಂದು ಬಾವಿಯು ಫಿಲ್ಟರ್ ವ್ಯವಸ್ಥೆಯನ್ನು ಹೊಂದಿದೆ. ಮಳೆಗಾಲದಲ್ಲಿ ಭೂಮಿಯ ಮೇಲ್ಮೈ ನೀರಿನ ಹರಿವು ಭೂಮಿಯ ಆಳಕ್ಕೆ ಹೋಗುವಂತೆ ಮಾಡಲಾಗಿದೆ. ನಾನು ಪರ್ಮಾಕಲ್ಚರ್ ತತ್ವಗಳನ್ನು ಸಹ ಜಾರಿಗೆ ತಂದಿದ್ದೇನೆ. ಈ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಾವು ನೀರನ್ನು ಸಂರಕ್ಷಿಸಬಹುದು ಮತ್ತು ಮಳೆ ನೀರು ಕೊಯ್ಲು ಉತ್ತಮಗೊಳಿಸಬಹುದು ಮತ್ತು ಪರಿಸರ ಸ್ನೇಹಿ ಮನೆಗಳನ್ನು ನಿರ್ಮಿಸಬಹುದು ಎಂದು ನಟ ಬರೆದುಕೊಂಡು ತಮ್ಮ ಫಾರ್ಮ್ ಹೌಸ್‌ನ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC