ಬೆಂಗಳೂರು ರಸ್ತೆಯಲ್ಲಿ ಯುವತಿಯನ್ನು ಬೈಕ್‌ನಲ್ಲಿ ಬೆನ್ನಟ್ಟಿ ಕಿರುಕುಳ ಕೊಟ್ಟ ಮೂವರು ಕಿಡಿಗೇಡಿಗಳು!

Published : Dec 26, 2025, 12:32 PM IST
Bengaluru Woman Harassed

ಸಾರಾಂಶ

ಬೆಂಗಳೂರಿನ ಸಿಲ್ಕ್ ಬೋರ್ಡ್ ಮುಖ್ಯ ರಸ್ತೆಯಲ್ಲಿ ಯುವತಿಯೊಬ್ಬರನ್ನು ಮೂವರು ಕಿಡಿಗೇಡಿಗಳು ಬೈಕ್‌ನಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಬೆಂಗಳೂರೇ ಬೆಚ್ಚಿ ಬಿಳಿಸುವಂತ ಘಟನೆ ನಡೆದಿತ್ತು. ಪ್ರೀತಿ ಮಾಡಲಿಲ್ಲ ಎಂದು ಯುವತಿಗೆ ಯುವಕನೋರ್ವ ನಡುರಸ್ತೆಯಲೇ ಲೈಂಗಿಕ ದೌರ್ಜನ್ಯ ಎಸಗಿದ್ದ, ಪೊಲೀಸರು ಆತನನ್ನು ಹೆಡೆಮುರಿಕಟ್ಟಿದ್ದರು. ಇದೀಗ ಇಂತಹುದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಸಿಲ್ಕ್ ಬೋರ್ಡ್ ಮುಖ್ಯ ರಸ್ತೆಯಲ್ಲಿ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವೈಭರ್ ವಾಸುದೇವನ್ ಎಂಬವರು ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಾತ್ರಿ ಸುಮಾರು 10 ಗಂಟೆ ವೇಳೆಗೆ ನಡೆದ ಘಟನೆ 

ಪೋಸ್ಟ್‌ನಲ್ಲಿ ನೀಡಿರುವ ಮಾಹಿತಿಯಂತೆ, ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆಗೆ ಯುವತಿಯೊಬ್ಬರು ಬೈಕ್‌ನಲ್ಲಿ ಸಿಲ್ಕ್ ಬೋರ್ಡ್ ಪ್ರದೇಶದ ಮೂಲಕ ಸಾಗುತ್ತಿದ್ದರು. ಈ ವೇಳೆ ಒಂದೇ ಬೈಕ್‌ನಲ್ಲಿ ಬಂದ ಮೂವರು ಕಿಡಿಗೇಡಿಗಳು ಯುವತಿಯನ್ನು ಕೆಲ ಕಿಲೋಮೀಟರ್‌ಗಳವರೆಗೆ ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಯುವತಿಯ ಚಲನವಲನವನ್ನು ಗಮನಿಸುತ್ತಾ ಕಿಲೋ ಮೀಟರ್ ಗಟ್ಟಲೆ ಹಿಂಬಾಲಿಸಿ ಮೂವರು ಕಿಡಿಗೇಡಿಗಳು ಯುವತಿಗೆ ಕಿರುಕುಳ ನೀಡಲು ಯತ್ನಿಸಿದ್ದಾರೆ. ಈ ಘಟನೆ ಸಾರ್ವಜನಿಕ ರಸ್ತೆಯಲ್ಲಿ ನಡೆದಿರುವುದು ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸುದ್ದಗುಂಟೆ ಪಾಳ್ಯ ಪೊಲೀಸರಿಂದ ತನಿಖೆ

ಘಟನೆ ಬೆಳಕಿಗೆ ಬಂದ ತಕ್ಷಣ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ವೈರಲ್ ಆದ ವಿಡಿಯೋ ಮತ್ತು ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಕಿಡಿಗೇಡಿಗಳು ಬಳಸಿದ್ದ ಬೈಕ್‌ನ ಮಾಲೀಕನ ಮಾಹಿತಿಯನ್ನು ಈಗಾಗಲೇ ಪತ್ತೆಹಚ್ಚಿದ್ದು, ಆರೋಪಿಗಳ ಗುರುತು ಮತ್ತು ಚಲನವಲನಗಳ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ನಗರದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನೆಯಾಗಿ ಪರಿಣಮಿಸಿರುವ ಈ ಘಟನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರ ಭದ್ರತೆಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

ಬೇರೆಯದನ್ನು ಬಿಟ್ರು; 120 ಅಡಿಕೆ ಮರ ಕಡಿದ್ರು; ಸಂಪೂರ್ಣ ತೋಟವನ್ನೇ ನಾಶ ಮಾಡಿದ ಅರಣ್ಯ ರಕ್ಷಕರು!
ಜಯದೇವ ಆಸ್ಪತ್ರೆ ಸೀನಿಯರ್ ನರ್ಸ್ ಕೊಲೆಗೆ ಟ್ವಿಸ್ಟ್; ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಜೂನಿಯರ್‌ನಿಂದಲೇ ಕೊಲೆ!