Bidadi Township Row: ಹೆಚ್‌ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?

Kannadaprabha News   | Kannada Prabha
Published : Jul 17, 2026, 10:14 AM IST
Basavaraj bommai on dk shivakumar bidadi township controversy

ಸಾರಾಂಶ

ರೈತರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್‌ ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಆರಂಭಿಸಿದ ಯೋಜನೆಯ ಮೇಲೆ ಡಿಸಿಎಂ ಡಿಕೆಶಿಗೆ ಏಕಿಷ್ಟು ಪ್ರೀತಿ, ಇದರ ಹಿಂದೆ ಗುಪ್ತ ಕನಸಿದೆಯೇ? ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಹಾವೇರಿ(ಜು.17): ರೈತರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್‌ ಯೋಜನೆ(Bidadi Township project) ಮುಂದುವರಿಸಲು ರಾಜ್ಯ ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ. ರೈತರ ಫಲವತ್ತಾದ ಜಮೀನಿನ ಬದಲು ಸರ್ಕಾರದ ಜಮೀನಿನಲ್ಲೇ ಟೌನ್‌ಶಿಪ್‌ ನಿರ್ಮಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಚ್‌ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆಯನ್ನು ಎಚ್.ಡಿ.ಕುಮಾರಸ್ವಾಮಿ ಪ್ರಾರಂಭಿಸಿದ್ದು, ಆ ನಂತರ ಯಡಿಯೂರಪ್ಪ ಅವರ ಅವಧಿಯಲ್ಲಿ ಈ ಬಗ್ಗೆ ಯಾವುದೇ ಪ್ರಗತಿಯಾಗಿಲ್ಲ ಎಂ ಸಿಎಂ ಡಿ.ಕೆ.ಶಿವಕುಮಾರ್‌(DK Shivakumar) ಹೇಳಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು ಇದನ್ನು ಪ್ರಾರಂಭಿಸಿದ್ದರೆ, ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!

ಎಲ್ಲದಕ್ಕೂ ಕುಮಾರಸ್ವಾಮಿ ಟೀಕಿಸುವ ಡಿಕೆಶಿ ಇದರಲ್ಲೇಕೆ ಆಸಕ್ತಿ?

ಎಲ್ಲ ವಿಷಯಗಳಲ್ಲೂ ಕುಮಾರಸ್ವಾಮಿ ಅವರನ್ನು ಟೀಕಿಸುವ ಶಿವಕುಮಾರ್‌, ಈ ಟೌನ್‌ಶಿಪ್ ಯೋಜನೆಯಲ್ಲಿ ಮಾತ್ರ ಅವರನ್ನು ಏಕೆ ಅನುಸರಿಸುತ್ತಿದ್ದಾರೆ. ಟೌನ್‌ಶಿಪ್ ಯೋಜನೆಯಲ್ಲಿ ಡಿಕೆಶಿಗೆ ಹಿತಾಸಕ್ತಿ ಏನಿದೆ? ಈ ಕನಸಿನ ಹಿಂದೆ ಸಿಎಂಗೆ ಮತ್ತೊಂದು ಗುಪ್ತ ಕನಸಿದೆಯೇ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: Yettinahole water: 10 ವರ್ಷಗಳ ಬಳಿಕ ಕೊನೆಗೂ ತುಮಕೂರಿಗೆ ಬಂತು ಎತ್ತಿನಹೊಳೆ ನೀರು!

PREV
Read more Articles on
click me!

Recommended Stories

ಕಳೆದ ವರ್ಷ MRPL ನಷ್ಟ, ಈ ವರ್ಷ ಮೊದಲ ತ್ರೈಮಾಸಿಕದಲ್ಲಿ ₹915 ಕೋಟಿ ನಿವ್ವಳ ಲಾಭ, ಆದಾಯ ದುಪ್ಪಟ್ಟು!
ಅಮೆರಿಕ ಯುವತಿ, ಸುಳ್ಯ ಯುವಕ.. ಇಬ್ಬರನ್ನೂ ಒಂದಾಗಿಸಿತು ಉಡುಪಿ ಶ್ರೀಕೃಷ್ಣನ ಮೇಲಿನ ಭಕ್ತಿ!