ರೈತ ಆತ್ಮಹತ್ಯೆ ಕೇಸ್ : ಬಿಗ್ ಟ್ವಿಸ್ಟ್

Published : Jul 18, 2018, 01:42 PM IST
ರೈತ ಆತ್ಮಹತ್ಯೆ ಕೇಸ್ : ಬಿಗ್ ಟ್ವಿಸ್ಟ್

ಸಾರಾಂಶ

ರೈತ ಆತ್ಮಹತ್ಯೆ ಪ್ರಕರಣವೊಂದಕ್ಕೆ ಇದೀಗ ಬಿಗ್ ಟ್ವಿಸ್ಟ್ ದೊರಕಿದೆ. ಕಳೆದ ತಿಂಗಳು ಹಾಸನದಲ್ಲಿ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಇದೀಗ ರೈತನ ಹತ್ಯೆ ಮಾಡಿ ಪರಿಹಾರ ಪಡೆಯಲು ಯತ್ನಿಸಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಹಾಸನ : ಹಾಸನದಲ್ಲಿ ಕಳೆದ ತಿಂಗಳು ನಡೆದ ರೈತ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ದೊರಕಿದೆ.  ಗಂಡನನ್ನು ಕೊಂದು‌ ರೈತ ಆತ್ಮಹತ್ಯೆ ಎಂದು‌ ಬಿಂಬಿಸಲು  ಪತ್ನಿಯೇ ಯತ್ನಿಸಿದ್ದಳು ಎನ್ನುವ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಕಳೆದ ಜೂನ್ 8 ರಂದು ಯೋಗೇಶ್ ಎನ್ನುವ ವ್ಯಕ್ತಿ ಬೇಲೂರು ತಾಲೂಕು‌ ಮತ್ತಾವರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ರೈತನ ಮರಣೊತ್ತರ ಪರೀಕ್ಷೆ ವರದಿ ಬಂದಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ.

ಈ ಸಂಬಂಧ ಯೋಗೇಶ್ ಪತ್ನಿ ಗಾಯತ್ರಿ ಹಾಗೂ ಪುತ್ರ ದರ್ಶನ್ ಅವರನ್ನು ಬಂಧಿಸಲಾಗಿದ್ದು,  ವಿಚಾರಣೆ  ವೇಳೆ ಇಬ್ಬರೂ ಕೂಡ ತಪ್ಪೊಪ್ಪಿಕೊಂಡಿದ್ದಾರೆ. 

ಯೋಗೇಶ್ ಮಲಗಿದ್ದಾಗ ಕತ್ತು ಹಿಸುಕಿ ಸಾಯಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಾಟಕವಾಡಿದ್ದಾಗಿ ತಾಯಿ ಮಗ ಹೇಳಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಎಂದು ಬಿಂಬಿಸಿ ಪರಿಹಾರ ಪಡೆಯಲು ಯತ್ನಿಸಿದ್ದರು ಎನ್ನುವ ವಿಚಾರ ಇದೀಗ ಬೆಳಕಿಗೆ ಬಂದಿದೆ. 

PREV
click me!

Recommended Stories

ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ