Covid Crisis: ಕೋವಿಡ್‌ ನಿಯಂತ್ರಣಕ್ಕಾಗಿ ಧಾರವಾಡದಲ್ಲಿ ಜೈವಿಕ ಲ್ಯಾಬ್‌: ಪ್ರಹ್ಲಾದ್‌ ಜೋಶಿ

Published : Apr 28, 2022, 06:54 AM IST
Covid Crisis: ಕೋವಿಡ್‌ ನಿಯಂತ್ರಣಕ್ಕಾಗಿ ಧಾರವಾಡದಲ್ಲಿ ಜೈವಿಕ ಲ್ಯಾಬ್‌: ಪ್ರಹ್ಲಾದ್‌ ಜೋಶಿ

ಸಾರಾಂಶ

*  ಕೇಂದ್ರದಿಂದ 10 ರಾಜ್ಯಗಳಲ್ಲಿ ಲ್ಯಾಬ್‌ ಸ್ಥಾಪನೆ *  ಕೊರೋನಾ ಲಸಿಕೆ ತಯಾರಿಸಲು ನೆರವು ನೀಡೋ ಲ್ಯಾಬ್‌ *  ರಾಜ್ಯ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗ​ಬೇ​ಕು

ಹುಬ್ಬಳ್ಳಿ(ಏ.28):  ಕೋವಿಡ್‌-19(Covid-19) ಹಾಗೂ ಅದೇ ರೀತಿಯ ರೂಪಾಂತರಿ ಮಹಾಮಾರಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹಾಗೂ ಅವುಗಳ ಗಂಭೀರ ಪರಿಣಾಮ ತಡೆ ಹಾಗೂ ನಿಯಂತ್ರಣಕ್ಕೆ ಸಹಾಯವಾಗಬಲ್ಲ ಆಧುನಿಕ ಲಸಿಕೆ ತಯಾರಿಸಲು ಅಗತ್ಯವಿರುವ ಜೈವಿಕ ಸುರಕ್ಷತಾ ಹಂತ-3ರ ಪ್ರಯೋಗಾಲಯ ಸ್ಥಾಪ​ನೆಗೆ ಕರ್ನಾ​ಟ​ಕದ(Karnataka) ಧಾರ​ವಾ​ಡ(Dharwad) ಆಯ್ಕೆ​ಯಾ​ಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಧಾನಮಂತ್ರಿ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಇನ್‌ಫ್ರಾಸ್ಟ್ರಕ್ಚರ್‌ ಮಿಶನ್‌ ಯೋಜನೆಯಡಿ ಇಂಥ ಜೈವಿಕ ಸುರಕ್ಷತಾ ಪ್ರಯೋಗಾಲಯಗಳನ್ನು ದೇಶದ ಆಯ್ದ 10 ರಾಜ್ಯಗಳಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕರ್ನಾಟಕದ ಧಾರವಾಡ ಕೂಡ ಒಂದು. ಧಾರವಾಡಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರಯೋಗಾಲಯ(International Standard Laboratory) ಬರು​ತ್ತಿ​ರು​ವುದು ಸಂತ​ಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Covid Crisis: ಇನ್ಮುಂದೆ ಮಾಸ್ಕ್‌ ಧರಿಸದಿದ್ರೆ 250 ದಂಡ..!

ಈ ವಿಚಾ​ರ​ವನ್ನು ಕೇಂದ್ರ ಸರ್ಕಾರದ(Central Government) ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ. ಜತೆಗೆ ಅಗತ್ಯವಿರುವ ಆರ್ಥಿಕ ಅನುದಾನ ಕೂಡಾ ಮಂಜೂರಾಗಿದೆ. ಪ್ರಯೋಗಾಲಯ ಸ್ಥಾಪನೆಗೆ ಧಾರವಾಡದಲ್ಲಿ ಸೂಕ್ತ ಸ್ಥಳ, ಇತ್ಯಾದಿಗಳ ಬಗ್ಗೆ ಮಾಹಿತಿ ಇರುವ ತಜ್ಞ ತಂಡದ ಕುರಿತು ಮಾಹಿತಿ ನೀಡಲು ಹಾಗೂ ಕೇಂದ್ರ ಸರ್ಕಾರದೊಂದಿಗೆ ಸಂವಹನ ನಡೆಸಲು ನೋಡಲ್‌ ಅಧಿಕಾರಿಯೊಬ್ಬರನ್ನು ಕೂಡಲೇ ನೇಮಿಸಲೂ ರಾಜ್ಯ ಸರ್ಕಾರಕ್ಕೆ(Government of Karnataka) ಸೂಚಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗ​ಬೇ​ಕೆಂದು ಸಚಿ​ವರು ಮನವಿ ಮಾಡಿ​ದ್ದಾ​ರೆ.

ಕರ್ನಾಟಕದಲ್ಲೂ ಕೋವಿಡ್‌ ಆತಂಕ?:

ಬೆಂಗಳೂರು: ರಾಜ್ಯದಲ್ಲಿ(Karnataka) ಕೊರೋನಾ(Coronavirus) ಕುರಿತು ಆತಂಕ ಪಡಬೇಕಾದ ಪರಿಸ್ಥಿತಿ ಇಲ್ಲ. ತಕ್ಷಣ ಕಠಿಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿಯೂ ವೈಜ್ಞಾನಿಕವಾಗಿ ಕಂಡು ಬಂದಿಲ್ಲ. ಸೋಂಕು ತಡೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌(Dr K Sudhakar) ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಭಾಗವಹಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪ್ರಕರಣ, ಪಾಸಿಟಿವಿಟಿ ದರ, ಸಾವಿನ ದರ ಯಾವುದನ್ನು ಪರಿಶೀಲಿಸಿದರೂ ರಾಜ್ಯದಲ್ಲಿ ಆತಂಕಪಡಬೇಕಾದ ಸ್ಥಿತಿ ಇಲ್ಲ. ಆದರೂ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು(Health Department) ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
 

PREV
Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ