'ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕೆಂದರೆ ಅಭ್ಯರ್ಥಿ ಬದಲಾವಣೆ ಆಗಲೇಬೇಕು'

Published : May 03, 2021, 03:36 PM IST
'ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕೆಂದರೆ ಅಭ್ಯರ್ಥಿ ಬದಲಾವಣೆ ಆಗಲೇಬೇಕು'

ಸಾರಾಂಶ

ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸಬರನ್ನು ಆಯ್ಕೆ ಮಾಡಬೇಕಿದೆ| ಅಭ್ಯರ್ಥಿ ಬದಲಾವಣೆಗೆ ಪಟ್ಟು ಹಿಡಿದ ಜನರು| ಕೆಲವು ತಿಂಗಳುಗಳ ಬಳಿಕ ಸಿಂದಗಿ ಉಪ ಚುನಾವಣೆ ಘೋಷಣೆ: ಚಂದ್ರಶೇಖರ ನಾಗೂರ| 

ಸಿಂದಗಿ(ಮೇ.03): ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಬಸವಕಲ್ಯಾಣದಲ್ಲಿ ಬಿಜೆಪಿಯ ಶರಣು ಸಲಗರ ಮತ್ತು ಬೆಳಗಾವಿಯಲ್ಲಿ ಮಂಗಲ ಅಂಗಡಿ ಆಯ್ಕೆಯಾಗಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರದ ಸಾಧನೆ ಮತ್ತು ಪ್ರಗತಿಪರವಾದ ಯೋಜನೆಗಳೇ ಗೆಲುವಿಗೆ ಕಾರಣವಾಗಿದೆ. ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಗೆಲ್ಲಬೇಕಾದಲ್ಲಿ ಅಭ್ಯರ್ಥಿಯ ಬದಲಾವಣೆ ಆಗಲೇಬೇಕು ಎಂದು ಸಿಂದಗಿ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಚಂದ್ರಶೇಖರ ನಾಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸಬರನ್ನು ಆಯ್ಕೆ ಮಾಡಬೇಕಿದೆ. ಈ ಬಾರಿ ಜನಗಳು ಅಭ್ಯರ್ಥಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆ ಘೋಷಣೆಗೂ ಮುನ್ನ ಟಿಕೆಟ್‌: ಕಾಂಗ್ರೆಸ್ಸಿನಲ್ಲಿ ಆಕ್ರೋಶ

ಕೆಲವು ತಿಂಗಳುಗಳ ಬಳಿಕ ಸಿಂದಗಿ ಉಪ ಚುನಾವಣೆ ಘೋಷಣೆಯಾಗಲಿದೆ. ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಂದ್ರಶೇಖರ ನಾಗೂರ ಮನವಿ ಮಾಡಿಕೊಂಡಿದ್ದಾರೆ.
 

PREV
click me!

Recommended Stories

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗಧಿ - ಸಿಎಂ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು AI ತಂತ್ರಜ್ಞಾನ.. ಇದು ಗುತ್ತಿಗೆದಾರನ ಜಾತಕ ಬಯಲು ಮಾಡಿಬಿಡುತ್ತೆ, ಹುಷಾರ್!