ಪ್ರಧಾನಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಕಾಂಗ್ರೆಸ್‌ ಶಾಸಕನ ವಿರುದ್ಧ ಬಿಜೆಪಿ ದೂರು

Published : Oct 06, 2023, 10:15 PM IST
ಪ್ರಧಾನಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಕಾಂಗ್ರೆಸ್‌ ಶಾಸಕನ ವಿರುದ್ಧ ಬಿಜೆಪಿ ದೂರು

ಸಾರಾಂಶ

ಕಾಂಗ್ರೆಸ್ ಆಂತರಿಕ ಕಚ್ಚಾಟವನ್ನು ಮರೆಮಾಚುವ ದುರುದ್ದೇಶದಿಂದ ಫುಲ್ವಾಮಾ ದಾಳಿಯನ್ನು ಸತ್ಯಪಾಲ ಮಲ್ಲಿಕರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿದ್ದಾರೆ. ಆದರಿಂದ ಇಬ್ಬರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ

ಆಳಂದ(ಅ.06): ಶಾಸಕ ಬಿ.ಆರ್. ಪಾಟೀಲ ಪ್ರಧಾನ ಮಂತ್ರಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಬಿಜೆಪಿ ಮಂಡಲ ಘಟಕ ಬುಧವಾರ ದೂರು ಸಲ್ಲಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಶಾಸಕರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂಗಳ ಬಗ್ಗೆ ನೀಡಿರುವ ಹೇಳಿಕೆ ಅವರ ದಿವಾಳಿತನವನ್ನು ಎತ್ತಿ ತೋರಿಸುತ್ತದೆ. ಇತ್ತೀಚೆಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನ ಸಂದರ್ಭದಲ್ಲಿ ಅವರು ಪ್ರಧಾನಿ ಮೋದಿಯವರ ಕಾರ್ಯಕ್ಷಮತೆ ಬಗ್ಗೆ ಮಾತನಾಡುತ್ತಾ ಫುಲ್ವಾಮಾ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿಯವರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡುತ್ತಾ ಆಧಾರ ರಹಿತವಾಗಿ ಟೀಕೆ ಮಾಡಿದ್ದಾರೆ. ಇದನ್ನು ಖಂಡಿಸುವುದಾಗಿ ಹೇಳಿದರು.

ಅಡ್ಡ ಬಂದ ಹಂದಿ ರಕ್ಷಿಸಲು ಹೋಗಿ 40 ಸಾವಿರ ಲೀ ಡೀಸೆಲ್ ತುಂಬಿದ್ದ ಟ್ಯಾಂಕರ್ ಸ್ಫೋಟ

ಕಾಂಗ್ರೆಸ್ ಆಂತರಿಕ ಕಚ್ಚಾಟವನ್ನು ಮರೆಮಾಚುವ ದುರುದ್ದೇಶದಿಂದ ಫುಲ್ವಾಮಾ ದಾಳಿಯನ್ನು ಸತ್ಯಪಾಲ ಮಲ್ಲಿಕರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿದ್ದಾರೆ. ಆದರಿಂದ ಇಬ್ಬರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಶಾಸಕರು ಬಿಜೆಪಿಯನ್ನು ದ್ವೇಷಿಸುವ ಭರದಲ್ಲಿ ದೇಶದ ಭದ್ರತೆ ಮತ್ತು ಸುರಕ್ಷತೆಯನ್ನು ಅಪಮಾನಗೊಳಿಸಿ ಸೈನಿಕರಿಗೆ ದೇಶವಾಸಿಗಳಿಗೆ ಅವಮಾನ ಮಾಡಿದ್ದಾರೆ. ಸೈನಿಕರ ಮತ್ತು ದೇಶದ ಜನರ ಬಳಿ ಬಹಿರಂಗ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಅವರ ವಿರುದ್ಧ ಜನಾಂದೋಲನ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪುತ್ರನ ಕಾಟ ತಾಳದೆ ಬಿಜೆಪಿ ಜತೆ ದೇವೇಗೌಡ ಮೈತ್ರಿ: ಚಲುವರಾಯಸ್ವಾಮಿ ಲೇವಡಿ

ಅ.2ರಂದು ಕಲಬುರಗಿ ಮಹಾತ್ಮಾ ಗಾಂಧಿಜಿಯವರ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ನಶೆ ಮುಕ್ತ ಭಾರತ ಆಂದೋಲನದಲ್ಲಿ ಶಾಸಕರು ಸಾರಾಯಿ ಬಗ್ಗೆ ಹೇಳಿರುವುದು ಅವರ ಡೋಂಗಿತನ ಎತ್ತಿ ತೋರಿಸುತ್ತಿದೆ. ಅಂಗಡಿ ತೆರೆಯಲು ಶಿಫಾರಸ್ಸು ಪತ್ರ ನೀಡುವವರು ಇವರೆ, ಸಾರಾಯಿ ವಿರುದ್ಧ ಭಾಷಣ ಮಾಡುವವರು ಇವರೆ ಆಗಿದ್ದಾರೆ. ಇವರನ್ನು ನಂಬುುದು ಹೇಗೆಂದು ಪ್ರಶ್ನಿಸಿದರು.

ಶಾಸಕರಿಗೆ ಅಭಿವೃದ್ಧಿಯ ಮೇಲೆ ಅಷ್ಟೊಂದು ಕಾಳಜಿ ಇದ್ದಿದ್ದರೆ ಸರ್ಕಾರದ ಹೊಸ ಅನುದಾನ ತಂದು ಕಾಮಗಾರಿಗಳ ಮಾಡಬೇಕು ಎಂದು ಅವರು ಒತ್ತಾಯಿಸಿದ ಅವರು, ರುದ್ರವಾಡಿಯಲ್ಲಿ ಎಂಎಸ್‍ಐ ಅಂಗಡಿ ತೆರೆಯುವಂತೆ ಹಾಗೂ ಗುತ್ತೇದಾರ ಅವಧಿಯಲ್ಲಿನ ಕಾಮಗಾರಿಗಳ ಬದಲಾವಣೆ ದಾಖಲೆಗಳನ್ನು ಇದೇ ವೇಳೆ ಅವರು ಬಿಡುಗಡೆ ಮಾಡಿದರು. ಬಿಜೆಪಿ ಮಂಡಲಿ ಅಧ್ಯಕ್ಷ ಆನಂದ ಪಾಟೀಲ, ಮಲ್ಲಿನಾಥ ಪರೆಣಿ ಇತರರು ಇದ್ದರು.

PREV
Read more Articles on
click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್