ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಜೆಪಿಗ ಎಚ್ ವಿಶ್ವನಾಥ್

Kannadaprabha News   | Asianet News
Published : Oct 08, 2020, 11:26 AM ISTUpdated : Oct 08, 2020, 11:30 AM IST
ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಜೆಪಿಗ ಎಚ್ ವಿಶ್ವನಾಥ್

ಸಾರಾಂಶ

ಸ್ವತಃ ಬಿಜೆಪಿ ಮುಖಂಡ ಎಚ್ ವಿಶ್ವನಾಥ್ ಸರ್ಕಾರದ ನಿರ್ಧಾರಕ್ಕೆ ಗರಂ ಆಗಿದ್ದು, ಎಚ್ಚರಿಕೆ ನಿಡಿದ್ದಾರೆ. 

 ಮೈಸೂರು (ಅ.08):  ಮೈಸೂರು ದಸರಾ ಆಚರಿಸಿ ಕೊರೋನಾ ಹೆಚ್ಚಾದರೆ ಜನರೇ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಎಚ್ಚರಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಅನುಮತಿ ಪಡೆದು ಊರತುಂಬ ಲೈಟ್‌ (ದೀಪಾಲಂಕಾರ) ಹಾಕಿದ್ದೀರಾ?. ಆರೋಗ್ಯ ಇಲಾಖೆಯ ಅನುಮತಿ ಪಡೆದಿದ್ದೀರಾ? ಏಕೆ ಈ ರೀತಿ ಹಠಕ್ಕೆ ಬಿದ್ದಿದ್ದೀರಾ? ಕೊರೋನಾ ಮಹಾಸ್ಫೋಟವಾದರೆ ಯಾರು ಹೊಣೆ? ಎಂದು ವಾಗ್ದಾಳಿ ನಡೆಸಿದರು.

ಯಾವುದೇ ಕಾರಣಕ್ಕೂ ದಸರೆಗೆ ಹೆಚ್ಚಿನ ಜನಸಂದಣಿ ಬೇಡ. ಏನಾದರೂ ಆದಲ್ಲಿ ದಸರೆಗೂ ಕಳಂಕ ಬರಲಿದೆ. ಯಾವುದೇ ಕಾರಣಕ್ಕೂ ಈ ರೀತಿ ಮಾಡಬೇಡಿ ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.

'ಬಂಬೂ' ಸವಾರಿ ಮಾಡಲು ಹೊರಟ್ಟಿದ್ದೀರಾ: ವಿಶ್ವನಾಥ್‌ ಆಕ್ರೋಶ ...

ಶಾಲೆಯ ಆರಂಭಕ್ಕೂ ಆತುರ ಬೇಡ :  ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೂ ಆತುರ ಬೇಡ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಸಲಹೆ ಮಾಡಿದರು.

ಈ ವಿಚಾರದಲ್ಲಿ ಅಧಿಕಾರಿಗಳು, ಜನಪ್ರನಿಧಿಗಳ ಸಲಹೆ ಮುಖ್ಯ ಅಲ್ಲ. ಪೋಷಕರು ಸಲಹೆ ಮುಖ್ಯ. ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿ, ನಂತರ ನಿರ್ಧರಿಸಿ ಎಂದರು.

ಆರೋಗ್ಯ, ಶಿಕ್ಷಣ ಹಾಗೂ ಪೊಲೀಸ್‌ ಇಲಾಖೆಯಲ್ಲಿಯೂ ಈ ಬಗ್ಗೆ ಚರ್ಚೆಯಾಗಲಿ ಎಂದು ಅವರು ಹೇಳಿದರು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC